Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಗನಯಾನ ಅಭಿಯಾನ: ಅ.21: ಇಸ್ರೋದಿಂದ ಕ್ರೂ...

ಗಗನಯಾನ ಅಭಿಯಾನ: ಅ.21: ಇಸ್ರೋದಿಂದ ಕ್ರೂ ಎಸ್ಕೇಪ್ ಸಿಸ್ಟಮ್ ನ ಮಾನವರಹಿತ ಹಾರಾಟ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ16 Oct 2023 9:56 PM IST
share
ಗಗನಯಾನ ಅಭಿಯಾನ: ಅ.21: ಇಸ್ರೋದಿಂದ ಕ್ರೂ ಎಸ್ಕೇಪ್ ಸಿಸ್ಟಮ್ ನ ಮಾನವರಹಿತ ಹಾರಾಟ ಪರೀಕ್ಷೆ

ಹೊಸದಿಲ್ಲಿ: ಗಗನಯಾನ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾನವರಹಿತ ಹಾರಾಟ ಪರೀಕ್ಷೆಯನ್ನು ಅ.21ರಂದು ನಡೆಸುವುದಾಗಿ ಇಸ್ರೋ ಸೋಮವಾರ ಪ್ರಕಟಿಸಿದೆ.

ಗಗನಯಾನ ಅಭಿಯಾನ ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನವಾಗಲಿದೆ. ನೈಜ ಅಭಿಯಾನಕ್ಕೆ ಹಸಿರು ನಿಶಾನೆಯನ್ನು ತೋರಿಸುವುದಕ್ಕೆ ಮುನ್ನ ರಾಕೆಟ್ ಮತ್ತು ಅಂತರಿಕ್ಷ ನೌಕೆಯ ಸರಣಿ ಪರೀಕ್ಷೆಗಳು ನಡೆಯಲಿವೆ. ಅಭಿಯಾನ 2024ರಲ್ಲಿ ನಡೆಯುವ ನಿರೀಕ್ಷೆಯಿದೆ, ಆದರೆ ಮುಹೂರ್ತವಿನ್ನೂ ನಿಗದಿಗೊಂಡಿಲ್ಲ.

‘ಕ್ರೂ ಎಸ್ಕೇಪ್ ಸಿಸ್ಟಮ್ (ಸಿಇಎಸ್)ನ ಸಾಧನೆಯನ್ನು ಪ್ರದರ್ಶಿಸಲಿರುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1(ಟಿವಿ-ಡಿ1)ಗಾಗಿ ಸಿದ್ಧತೆಗಳು ನಡೆಯುತ್ತಿವೆ. ಟಿವಿ-ಡಿ1ರ ಪರೀಕ್ಷಾರ್ಥ ಹಾರಾಟವು ಅ.21ರಂದು ಬೆಳಿಗ್ಗೆ ಏಳರಿಂದ ಒಂಭತ್ತು ಗಂಟೆಯ ನಡುವೆ ಶ್ರೀಹರಿಕೋಟಾದಿಂದ ನಡೆಯಲಿದೆ ’ಎಂದು ಇಸ್ರೋ ಟ್ವೀಟಿಸಿದೆ.

ಸಿಇಎಸ್ ಯಾವುದೇ ತುರ್ತು ಸಂದರ್ಭಗಳಿಂದಾಗಿ ಬಾಹ್ಯಾಕಾಶ ಯಾನವು ವಿಫಲಗೊಂಡರೆ ಅಂತರಿಕ್ಷ ನೌಕೆಯಲ್ಲಿನ ಕ್ರೂ ಮಾಡ್ಯೂಲ್ ನಿಂದ ಯಾನಿಗಳನ್ನು ಸುರಕ್ಷಿತವಾಗಿ ಪಾರು ಮಾಡುವ ವ್ಯವಸ್ಥೆಯಾಗಿದೆ. ಸಿಇಎಸ್ ಮೂಲಕ ಹೊರಕ್ಕೆ ತಳ್ಳಲ್ಪಡುವ ಬಾಹ್ಯಾಕಾಶ ಯಾನಿಗಳನ್ನು ಭೂಮಿಯನ್ನು ತಲುಪಿದ ಬಳಿಕ ಸುರಕ್ಷಿತವಾಗಿ ಹೊರತೆಗೆಯಲಾಗುವುದು. ಕ್ರೂ ಮಾಡ್ಯೂಲ್ ಅಂತರಿಕ್ಷ ನೌಕೆಯಲ್ಲಿ ಯಾನಿಗಳು ವಾಸವಾಗಿರುವ ಭಾಗವಾಗಿದ್ದು, ಒತ್ತಡಕ್ಕೊಳಗಾದ ಲೋಹೀಯ ರಚನೆಯಾಗಿರುವ ಅದರೊಳಗೆ ಭೂಮಿಯಲ್ಲಿನ ವಾತಾವರಣವನ್ನು ಸೃಷ್ಟಿಸಲಾಗಿರುತ್ತದೆ.

ಪ್ರಧಾನಿ ನರೇಂದ್ರ ಮೋದಿಯವರು 2018ರಲ್ಲಿ ಗಗನಯಾನ ಕಾರ್ಯಕ್ರಮವನ್ನು ಪ್ರಕಟಿಸಿದ್ದು,ನಿಗದಿಯಂತೆ 2022ರಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್ ಸಾಂಕ್ರಾಮಿಕದಿಂದಾಗಿ ,ಮುಂದಿನ ವರ್ಷ ನಡೆಯುವ ನಿರೀಕ್ಷೆಯಿದೆ.

ಭಾರತವು ತನ್ನ ಮಹತ್ವಾಕಾಂಕ್ಷೆಯ ಗಗನಯಾನ ಅಭಿಯಾನಕ್ಕಾಗಿ ಭಾರತೀಯ ವಾಯುಪಡೆಯ ನಾಲ್ವರು ಪೈಲಟ್ ಗಳನ್ನು ಆಯ್ಕೆ ಮಾಡಿದೆ. ರಶ್ಯಾದಲ್ಲಿ ತಮ್ಮ ತರಬೇತಿಯನ್ನು ಪೂರ್ಣಗೊಳಿಸಿರುವ ಅವರು ಪ್ರಸ್ತುತ ಭಾರತದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X