Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಎಸಿಯಲ್ಲಿ ಭಾರತ-ಚೀನಾ ಪಡೆಗಳ ಘರ್ಷಣೆಯ...

ಎಲ್ಎಸಿಯಲ್ಲಿ ಭಾರತ-ಚೀನಾ ಪಡೆಗಳ ಘರ್ಷಣೆಯ ಎರಡು ಘಟನೆಗಳು ತಡವಾಗಿ ಬೆಳಕಿಗೆ

2021ರ ಸೆಪ್ಟೆಂಬರ್, 2022ರ ನವೆಂಬರ್ ನಲ್ಲಿ ನಡೆದಿದ್ದ ಘರ್ಷಣೆ ; ಪಶ್ಚಿಮಕಮಾಂಡ್ ನ ಶೌರ್ಯಪ್ರಶಸ್ತಿ ಪ್ರದಾನ ಕಾರ್ಯಕ್ರಮದ ವೀಡಿಯೊದಲ್ಲಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ17 Jan 2024 9:54 PM IST
share

ಹೊಸದಿಲ್ಲಿ: ವಾಸ್ತವ ಗಡಿನಿಯಂತ್ರಣ ರೇಖೆ (ಎಲ್ಎಸಿ)ಯಲ್ಲಿ ಭಾರತೀಯ ಸೇನೆ ಹಾಗೂ ಚೀನಿ ಪಡೆಗಳ ನಡುವೆ 2021ರ ಸೆಪ್ಟೆಂಬರ್ ಹಾಗೂ 2022ರ ನವೆಂಬರ್ ನಲ್ಲಿ ಎರಡು ಘರ್ಷಣೆಗಳು ನಡೆದಿರುವುದು ಈಗ ತಡವಾಗಿ ಬಹಿರಂಗವಾಗಿದೆ. ಭಾರತೀಯ ಸೇನಾ ಯೋಧರಿಗೆ ಶೌರ್ಯ ಪುರಸ್ಕಾರಗಳನ್ನು ಪ್ರದಾನ ಮಾಡಿದ ಸಂದರ್ಭ ಈ ಬಗ್ಗೆ ಉಲ್ಲೇಖಗಳನ್ನು ಮಾಡಿದ್ದರಿಂದ ಈ ವಿಷಯವು ಬೆಳಕಿಗೆ ಬಂದಿದೆ. ಕಳೆದ ವಾರ ನಡೆದ ಭಾರತೀಯ ಸೇನೆಯ ಪಶ್ಚಿಮ ಕಮಾಂಡ್ ನ ಪದವಿಪ್ರದಾನ ಕಾರ್ಯಕ್ರಮದಲ್ಲಿ ಈ ಬಗ್ಗೆ ಉಲ್ಲೇಖಗಳನ್ನು ಮಾಡಲಾಗಿದೆ. ವಾಸ್ತವ ಗಡಿನಿಯಂತ್ರಣ ರೇಖೆಯುದ್ದಕ್ಕೂ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ)ಯ ಸೈನಿಕರು ಪ್ರದರ್ಶಿಸಿದ ಆಕ್ರಮಣಕಾರಿ ನಡವಳಿಕೆಗೆಳಿಗೆ ಭಾರತೀಯ ಯೋಧರು ಹೇಗೆ ದೃಢವಾಗಿ ಪ್ರತಿಕ್ರಿಯಿಸಿದರೆಂಬುದನ್ನು ಶೌರ್ಯಪ್ರಶಸ್ತಿ ಪ್ರದಾನ ವೇಳೆ ಪ್ರಶಂಸಿಸಲಾಗಿತ್ತು.

ಚಂಡಿಮಂದಿರ್ ನಲ್ಲಿ ಮುಖ್ಯ ಕಾರ್ಯಾಲಯವನ್ನು ಹೊಂದಿರುವ ಸೇನೆಯ ಪಶ್ಚಿಮಕಮಾಂಡ್ ನ ಪದವಿಪ್ರದಾನ ಸಮಾರಂಭದ ವೀಡಿಯೊವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಶೌರ್ಯಪ್ರಶಸ್ತಿಗಳ ಕುರಿತಾದ ವಿವರಣೆಗಳನ್ನು ಅದು ಒಳಗೊಂಡಿತ್ತು. ಅದರಲ್ಲಿ ಮಾಡಲಾದ ಉಲ್ಲೇಖಗಳ ಪ್ರಕಾರ 2021ರ ಸೆಪ್ಟೆಂಬರ್ ಹಾಗೂ 2022ರ ನವೆಂಬರ್ ನಲ್ಲಿ ಈ ಎರಡು ಘಟನೆಗಳು ನಡೆದಿವೆ. ಈ ಬೆಳವಣಿಗೆಗಳ ಕುರಿತಾಗಿ ಸೇನೆಯು ಈವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆಗೊಳಿಸಿಲ್ಲ. ಆದರೆ ಸೋಮವಾರ ಈ ವೀಡಿಯೊ ನಿಷ್ಕ್ರಿಯಗೊಂಡಿತ್ತು.

ಪದವಿಪ್ರದಾನ ಕಾರ್ಯಕ್ರಮದಲ್ಲಿ ಚೀನಿ ಅತಿಕ್ರಮಣವನ್ನು ಮಟ್ಟಹಾಕಿದ ಕಾರ್ಯಾಚರಣೆಯಲ್ಲಿ ಭಾಗಿಗಳಾಗಿದ್ದ ಹಲವಾರು ಭಾರತೀಯ ಸೇನಾ ಸಿಬ್ಬಂದಿಯನ್ನು ಗೌರವಿಸಲಾಗಿತ್ತು ಹಾಗೂ ಚೀನಿ ಯೋಧರ ಆಕ್ರಮಣಕಾರಿ ನಡವಳಿಕೆಗೆ ಭಾರತೀಯ ಯೋಧರು ನೀಡಿದ ದೃಢವಾದ ಪ್ರತಿಕ್ರಿಯೆಯನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಲಾಗಿತ್ತು.

2020ರ ಜೂನ್ ನಲ್ಲಿ ಗಲ್ವಾನ್ ಕಣಿವೆಯಲ್ಲಿ ಘರ್ಷಣೆಗಳು ನಡೆದ ಬಳಿಕ 3488 ಕಿ.ಮೀ. ವಿಸ್ತೀರ್ಣದ ವಾಸ್ತವ ಗಡಿನಿಯಂತ್ರಣ ರೇಖೆ (ಎಲ್ಎಸಿ)ಯುದ್ದಕ್ಕೂ ಭಾರತೀಯ ಸೇನೆಯು ಸಮರಸನ್ನದ್ಧ ಸ್ಥಿತಿಯನ್ನು ಕಾಯ್ದುಕೊಂಡಿತ್ತು.

2020ರ ಮೇನಲ್ಲಿ ಪೂರ್ವ ಲಡಾಕ್ನಲ್ಲಿ ಆರಂಭಗೊಂಡ ಗಡಿವಿವಾದದ ಹಿನ್ನೆಲೆಯಲ್ಲಿ ಭಾರತ ಹಾಗೂ ಚೀನಿ ಪಡೆಗಳ ನಡುವೆ ಹಲವಾರು ಭಾರಿ ಸಣ್ಣಪಟ್ಟ ಘರ್ಷಣೆಗಳು ನಡೆದಿದ್ದವು. 2022ರ ಡಿಸೆಂಬರ್ 9ರಂದು ಚೀನಿ ಪಡೆಗಳು ಎಲ್ಎಸಿಯ ತವಾಂಗ್ ವಲಯವನ್ನು ಅತಿಕ್ರಮಿಸಲು ನಡೆಸಿದ ಯತ್ನವನ್ನು ಭಾರತೀಯ ಸೈನಿಕರು ವಿಫಲಗೊಳಿಸಿದ್ದರು.

ಈ ಘಟನೆ ನಡೆದ ನಾಲ್ಕು ದಿನಗಳ ಬಳಿಕ ರಾಜನಾಥ ಸಿಂಗ್ ಅವರು ಸಂಸತ್ನಲ್ಲಿ ಈ ಬಗ್ಗೆ ಹೇಳಿಕೆಯೊಂದನ್ನು ನೀಡಿ, ತವಾಂಗ್ವಲಯವನ್ನು ಅತಿಕ್ರಮಿಸುವ ಚೀನದ ಯತ್ನವನ್ನು ಭಾರತೀಯ ಪಡೆಗಳು ದೃಢವಾಗಿ ಎದುರಿಸಿದವು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X