Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ | ಸರ್ಕಾರಿ ಅಧಿಕಾರಿಯಿಂದ...

ಉತ್ತರ ಪ್ರದೇಶ | ಸರ್ಕಾರಿ ಅಧಿಕಾರಿಯಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ

ವಾರ್ತಾಭಾರತಿವಾರ್ತಾಭಾರತಿ14 Aug 2024 9:33 AM IST
share
ಉತ್ತರ ಪ್ರದೇಶ | ಸರ್ಕಾರಿ ಅಧಿಕಾರಿಯಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ

ಲಕ್ನೋ: ಆರು ವರ್ಷ ವಯಸ್ಸಿನ ದಲಿತ ಬಾಲಕಿಯೊಬ್ಬಳ ಮೇಲೆ ಆಕೆಯ ಮನೆಯಲ್ಲೇ ಅತ್ಯಾಚಾರ ಎಸಗಿ, ಮೇಕೆಯ ಜತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ 57 ವರ್ಷ ವಯಸ್ಸಿನ ಸರ್ಕಾರಿ ಅಧಿಕಾರಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಚೇರಿ ಕೆಲಸಗಳಿಗಾಗಿ ಪದೇ ಪದೇ ಗ್ರಾಮಕ್ಕೆ ಬರುತ್ತಿದ್ದ ಅಧಿಕಾರಿ, ಪಕ್ಕದ ಮನೆಯ ಮಗುವಿನ ಜತೆ ಆಟವಾಡುತ್ತಿದ್ದ ಬಾಲಕಿಯನ್ನು ಕಂಡು, ಮನೆಯಲ್ಲಿ ದೊಡ್ಡವರು ಯಾರೂ ಇಲ್ಲ ಎನ್ನುವುದನ್ನು ದೃಢಪಡಿಸಿಕೊಂಡು ಮನೆಗೆ ನುಗ್ಗಿದ ಎಂದು ಸಂತ್ರಸ್ತೆಯ ಕುಟುಂಬದವರು ಹೇಳಿದ್ದಾರೆ.

ಈ ಅತ್ಯಾಚಾರ ಹಾಗೂ ಮೃಗಸಂಭೋಗವನ್ನು ಪಕ್ಕದ ಮನೆಯ ಮಗು ದಾಖಲಿಸಿಕೊಂಡಿದೆ. ಈ ಘೋರ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಕ್ಷಣ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿದ್ದು, ಬಾಲಕಿಯ ಕುಟುಂಬಕ್ಕೆ 8.25 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.

ಆರೋಪಿ ಅಧಿಕಾರಿ ಗಜೇಂದ್ರ ಸಿಂಗ್ ರಸೂಲ್ ಪುರ ಗ್ರಾಮದವನಾಗಿದ್ದು, ಶಿಖಾರಪುರ ತಾಲೂಕು ಕೃಷಿ ಅಭಿವೃದ್ಧಿ ಅಧಿಕಾರಿಯಾಗಿ ನಿಯೋಜಿತನಾಗಿದ್ದ. ಅಹ್ಮದ್ ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಕ್ಕೆ ಸೋಮವಾರ ಸಂಜೆ ಈತ ಭೇಟಿ ನೀಡಿದ್ದು, ಮನೆಯ ಅಂಗಳದಲ್ಲಿ ಬಾಲಕ- ಬಾಲಕಿ ಆಟವಾಡುತ್ತಿರುವುದನ್ನು ಕಂಡು ಮನೆಯನ್ನು ಪ್ರವೇಶಿಸಿ ಮಂಚದ ಮೇಲೆ ಕುಳಿತ ಎನ್ನಲಾಗಿದೆ. "ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದ್ದೇ ಅಲ್ಲಿ ಕಟ್ಟಿಹಾಕಿದ್ದ ಮೇಕೆಯ ಮೇಲೆ ಕೂಡಾ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ. ಒಬ್ಬ ಬಾಲಕ ಈ ಕೃತ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ. ಸಿಂಗ್ ನನ್ನು ಬಂಧಿಸಲಾಗಿದ್ದು, ಆತನನ್ನು ಅಮಾನತುಗೊಳಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ ಎಸ್ ಪಿ ಶ್ಲೋಕ್ ಕುಮಾರ್ ವಿವರಿಸಿದ್ದಾರೆ.

ಬಾಲಕಿಯ ತಂದೆ ಹಾಗೂ ತಾಯಿ ಘಟನೆ ನಡೆದ ಸಂದರ್ಭದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ನಡೆದ ಘಟನೆಯನ್ನು ಬಾಲಕ ಹಾಗೂ ಬಾಲಕಿ ಪೋಷಕರಿಗೆ ವಿವರಿಸಿದ್ದು, ಮಂಗಳವಾರ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X