Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಯನಾಡ್, ಅಲೆಪ್ಪಿ ಕ್ಷೇತ್ರಗಳ ಗೆಲುವಿಗೆ...

ವಯನಾಡ್, ಅಲೆಪ್ಪಿ ಕ್ಷೇತ್ರಗಳ ಗೆಲುವಿಗೆ ಕಾರ್ಯತಂತ್ರ : ಕಾಂಗ್ರೆಸ್‌ ಮುಖಂಡರ ಜತೆ ಝಮೀರ್ ಅಹ್ಮದ್ ಖಾನ್ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ3 April 2024 11:29 PM IST
share
ವಯನಾಡ್, ಅಲೆಪ್ಪಿ ಕ್ಷೇತ್ರಗಳ ಗೆಲುವಿಗೆ ಕಾರ್ಯತಂತ್ರ : ಕಾಂಗ್ರೆಸ್‌ ಮುಖಂಡರ ಜತೆ ಝಮೀರ್ ಅಹ್ಮದ್ ಖಾನ್ ಚರ್ಚೆ

ಕೇರಳ(ವಯನಾಡ್): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನ ಕೇರಳ ಪ್ರವಾಸ ಕೈಗೊಂಡಿದ್ದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅವರು ವಯನಾಡ್ ನಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಖಾಸಗಿ ಹೋಟೆಲ್‍ನಲ್ಲಿ ಸಭೆ ನಡೆಸಿದ ಅವರು, ಎಐಸಿಸಿ ಮುಖಂಡ ರಾಹುಲ್ ಗಾಂಧಿ ಸ್ಪರ್ಧೆ ಮಾಡಿರುವ ವಯನಾಡ್ ಹಾಗೂ ಕೆ.ಸಿ.ವೇಣುಗೋಪಾಲ್ ಸ್ಪರ್ಧೆಯ ಅಲೆಪ್ಪಿ ಕ್ಷೇತ್ರಗಳಲ್ಲಿ ಗೆಲುವಿನ ಕಾರ್ಯತಂತ್ರ ಗಳ ಬಗ್ಗೆ ಚರ್ಚಿಸಿದರು. ವಯನಾಡ್ ವ್ಯಾಪ್ತಿಯ ಕಲ್ಪಟ ಶಾಸಕ ಸಿದ್ದಿಕ್, ಸುಲ್ತಾನ್ ಬತ್ತೆರಿ ಶಾಸಕ ಐ.ಸಿ.ಬಾಲಕೃಷ್ಣನ್, ಅಲೆಪ್ಪಿ ವ್ಯಾಪ್ತಿಯ ಅರೂರ್, ಚೆರ್ತಾಲಾ. ಅಲಪುರ ಮುಖಂಡರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಎಐಸಿಸಿ ಉಸ್ತುವಾರಿ ದೀಪಾ ದಾಸ್ ಮುಂಶಿ ಅವರೊಂದಿಗೂ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಮಾತುಕತೆ ನಡೆಸಿದರು. ದೀಪಾ ದಾಸ್ ಮುಂಶಿ ಅವರು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲೂ ಉಸ್ತುವಾರಿಯಾಗಿದ್ದಾಗ ಸಚಿವ ಝಮೀರ್ ಅಹ್ಮದ್ ಖಾನ್ ಅಲ್ಲಿನ ಸ್ಟಾರ್ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದರು.

ಝಮೀರ್ ಅಹ್ಮದ್ ಖಾನ್ ಅವರು ಮೂರು ದಿನಗಳ ಪ್ರವಾಸದಲ್ಲಿ ಕ್ಯಾಲಿಕಟ್‍ನಲ್ಲಿ ಗ್ರಾಂಡ್ ಮುಫ್ತಿ ಶೇಕ್ ಅಬೂಬಕರ್ ಮುಸ್ಲಿಯಾರ್(ಎಪಿ ಉಸ್ತಾದ್)ಸೇರಿದಂತೆ ಮುಸ್ಲಿಂ ಧಾರ್ಮಿಕ ಮುಖಂಡರು ಹಾಗೂ ಸಮುದಾಯದ ಪ್ರಮುಖ ನಾಯಕರು ಮತ್ತು ವಯನಾಡ್ ಯುಡಿಎಫ್ ಅಧ್ಯಕ್ಷ ಕೆ.ಕೆ.ಅಹ್ಮದ್ ಹಾಜಿ ಅವರನ್ನು ಝಮೀರ್ ಅಹ್ಮದ್ ಖಾನ್ ಭೇಟಿ ಮಾಡಿದ್ದರು.

ಇದೇ ಸಂದರ್ಭದಲ್ಲಿ ಝಮೀರ್‌ ಅಹ್ಮದ್ ಖಾನ್ ಅಲೆಪ್ಪಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ವಯನಾಡಿನಲ್ಲಿ ಭೇಟಿ ಮಾಡಿ ಚರ್ಚಿಸಿದರು.

Tags

WayanadAlleppeyZameer Ahmed KhanRamesh Chennithala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X