Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜಾಬ್‌, ಈಶಾನ್ಯ ರಾಜ್ಯಗಳೂ ಅಂತಹುದೇ...

ಪಂಜಾಬ್‌, ಈಶಾನ್ಯ ರಾಜ್ಯಗಳೂ ಅಂತಹುದೇ ಪರಿಸ್ಥಿತಿ ಎದುರಿಸಿವೆ: ಜಮ್ಮು ಕಾಶ್ಮೀರ ವಿಭಜನೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ30 Aug 2023 2:33 PM IST
share
ಪಂಜಾಬ್‌, ಈಶಾನ್ಯ ರಾಜ್ಯಗಳೂ ಅಂತಹುದೇ ಪರಿಸ್ಥಿತಿ ಎದುರಿಸಿವೆ: ಜಮ್ಮು ಕಾಶ್ಮೀರ ವಿಭಜನೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಜಮ್ಮು ಕಾಶ್ಮೀರದಂತಹುದೇ ಪರಿಸ್ಥಿತಿಗಳನ್ನು ಪಂಜಾಬ್‌ ಮತ್ತು ಈಶಾನ್ಯ ರಾಜ್ಯಗಳೂ ಎದುರಿಸಿವೆ ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಅದೇ ಸಮಯ ಆಗಸ್ಟ್‌ 2019ರಂದು ಜಮ್ಮು ಕಾಶ್ಮೀರದ ವಿಭಜನೆಯ ಅಗತ್ಯತೆಯನ್ನು ಪ್ರಶ್ನಿಸಿದೆ.

ಒಂದು ರಾಜ್ಯವನ್ನು ವಿಭಜಿಸಿ ಅದರ ಅಧಿಕಾರವು ಕೇಂದ್ರ ಸರ್ಕಾರದ ಬಳಿ ಬಂದ ನಂತರ ಆ ಅಧಿಕಾರವು “ದುರುಪಯೋಗವಾಗುವುದಿಲ್ಲ” ಎಂಬುದನ್ನು ಹೇಗೆ ಖಾತ್ರಿಪಡಿಸಬಹುದು ಎಂದೂ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಪ್ರಶ್ನಿಸಿದರು.

ಸಂವಿಧಾನದ 370 ವಿಧಿಯನ್ನು ರದ್ದುಗೊಳಿಸಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೈಬಿಟ್ಟ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದು ಹಲವು ಅರ್ಜಿಗಳ ವಿಚಾರಣೆಯ 12ನೇ ದಿನದಂದು ಸುಪ್ರೀಂ ಕೋರ್ಟ್‌ ಮೇಲಿನ ಪ್ರಶ್ನೆಯನ್ನು ಕೇಳಿದೆ.

ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಪ್ರತಿಕ್ರಿಯಿಸಿ ಎಲ್ಲಾ ನೆರೆಯ ರಾಷ್ಟ್ರಗಳ ಸ್ನೇಹಪರವಾಗಿಲ್ಲ ಹಾಗೂ ಜಮ್ಮು ಕಾಶ್ಮೀರದ ಇತಿಹಾಸ ಮತ್ತು ಅದರ ಪ್ರಸಕ್ತ ಸ್ಥಿತಿ “ಕಲ್ಲು ತೂರಾಟ, ಮುಷ್ಕರಗಳು, ಸಾವುಗಳು, ಉಗ್ರ ದಾಳಿಗಳು” ಪರಿಗಣಿಸಿದಾಗ ಅದನ್ನು ಮುಖ್ಯವಾಹಿನಿಗೆ ತರುವ ಅಗತ್ಯವಿದೆ,” ಎಂದು ಹೇಳಿದರು.

ಆಗ ಮಧ್ಯಪ್ರವೇಶಿಸಿದ ಮುಖ್ಯ ನ್ಯಾಯಮೂರ್ತಿ, “ಒಮ್ಮೆ ಒಂದು ರಾಜ್ಯ ವಿಭಜನೆಯಾಗಿ ಅಧಿಕಾರ ಕೇಂದ್ರದ ಕೈಗೆ ಹೋದಾಗ ದುರುಪಯೋಗವಾಗದು ಎಂದು ಹೇಗೆ ಖಾತ್ರಿಪಡಿಸುವುದು,” ಎಂದು ಕೇಳಿದರು.

ಪಂಚ ಸದಸ್ಯರ ಸಂವಿಧಾನಿಕ ಪೀಠದ ಭಾಗವಾಗಿರುವ ಜಸ್ಟಿಸ್‌ ಎಸ್‌ ಕೆ ಕೌಲ್‌ ಪ್ರತಿಕ್ರಿಯಿಸಿ “ಇದು ಇಂತಹ ಒಂದೇ ಪ್ರಕರಣವಲ್ಲ, ಪಂಜಾಬ್‌ನ ಉತ್ತರ ಗಡಿ ಭಾಗ ಕೂಡ ಕಷ್ಟಕರ ಪರಿಸ್ಥಿತಿ ಎದುರಿಸಿತ್ತು. ಕೆಲ ಈಶಾನ್ಯ ರಾಜ್ಯಗಳು ಕೂಡ. ಈ ಪ್ರತಿಯೊಂದು ರಾಜ್ಯಗಳು ಈ ಸಮಸ್ಯೆ ಮುಂದೆ ಎದುರಿಸಿದರೆ…” ಎಂದು ಕೇಳಿದರು.

“ಅಸ್ತಿತ್ವದಲ್ಲಿರುವ ರಾಜ್ಯವೊಂದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಅಧಿಕಾರ ಸಂಸತ್ತಿಗಿದೆಯೇ?” ಎಂಬ ಪ್ರಶ್ನೆಯನ್ನೂ ಮುಖ್ಯ ನ್ಯಾಯಮೂರ್ತಿಗಳು ಕೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X