Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ANI ಸುದ್ದಿ ಸಂಸ್ಥೆಯಿಂದ ಕಾಪಿರೈಟ್...

ANI ಸುದ್ದಿ ಸಂಸ್ಥೆಯಿಂದ ಕಾಪಿರೈಟ್ ಹೆಸರಲ್ಲಿ ಸುಲಿಗೆ; ಯೂಟ್ಯೂಬರ್ ಮೋಹಕ್ ಮಂಗಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ26 May 2025 1:23 PM IST
share
ANI ಸುದ್ದಿ ಸಂಸ್ಥೆಯಿಂದ ಕಾಪಿರೈಟ್ ಹೆಸರಲ್ಲಿ ಸುಲಿಗೆ; ಯೂಟ್ಯೂಬರ್ ಮೋಹಕ್ ಮಂಗಲ್ ಆರೋಪ

ಹೊಸದಿಲ್ಲಿ: ಜನಪ್ರಿಯ ಯೂಟ್ಯೂಬರ್ ಮತ್ತು ಎಜುಕೇಟರ್ ಮೋಹಕ್ ಮಂಗಲ್ ಅವರು ಪ್ರಮುಖ ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI) ಕಾಪಿರೈಟ್ ಜಾರಿಯ ಸೋಗಿನಲ್ಲಿ ವ್ಯವಸ್ಥಿತ ಸುಲಿಗೆಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಅವರು ಮಾಡಿರುವ "ಡಿಯರ್ ANI" ಎಂಬ ಶೀರ್ಷಿಕೆಯ ವೀಡಿಯೊದಲ್ಲಿ, ANI ತನ್ನ ಯೂಟ್ಯೂಬ್ ಚಾನೆಲ್ ಮೇಲೆ ಹಲವಾರು ಕಾಪಿರೈಟ್ ಸ್ಟ್ರೈಕ್‌ಗಳನ್ನು ನೀಡಿದ್ದು, ನಂತರ ಸ್ಟ್ರೈಕ್‌ಗಳನ್ನು ರದ್ದುಗೊಳಿಸಲು ಮತ್ತು ಚಾನೆಲನ್ನು ಡಿಲೀಟ್ ಮಾಡುವುದರಿಂದ ತಪ್ಪಿಸಲು 45-50 ಲಕ್ಷ ರೂ. ಪಾವತಿ ಮಾಡುವಂತೆ ಕೇಳಿತು ಎಂದು ಮಂಗಲ್ ಆರೋಪಿಸಿದ್ದಾರೆ.

ಕೋಲ್ಕತ್ತಾ ಅತ್ಯಾಚಾರ ಪ್ರಕರಣದ ಕುರಿತು ಮಂಗಲ್ ಮಾಡಿದ ವೀಡಿಯೊದ ಮೇಲೆ ANI ಕಾಪಿರೈಟ್ ಸ್ಟ್ರೈಕ್ ಅನ್ನು ಕಳುಹಿಸಿದಾಗ ಸಮಸ್ಯೆ ಪ್ರಾರಂಭವಾಯಿತು ಎಂದು ಮಂಗಲ್ ವಿವರಿಸಿದ್ದಾರೆ. 16 ನಿಮಿಷಗಳ ವೀಡಿಯೊದಲ್ಲಿ ANI ಯ ಕೇವಲ 11 ಸೆಕೆಂಡುಗಳ ದೃಶ್ಯ ಬಳಸಲಾಗಿತ್ತು ಎಂದು ಅವರು ಉಲ್ಲೇಖಿಸಿದ್ದಾರೆ. ಇದರ ನಂತರ ʼಆಪರೇಷನ್ ಸಿಂಧೂರ್‌ʼ ಕುರಿತ ಅವರ 38 ನಿಮಿಷಗಳ ವೀಡಿಯೊಗೆ ಎರಡನೇ ಸ್ಟ್ರೈಕ್ ಮಾಡಲಾಗಿದೆ. ಇದರಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಒಳಗೊಂಡ 9 ಸೆಕೆಂಡುಗಳ ದೃಶ್ಯಗಳನ್ನು ಬಳಸಲಾಗಿದೆ. ಯೂಟ್ಯೂಬ್ ನೀತಿಯ ಪ್ರಕಾರ, ಮೂರು ಕಾಪಿರೈಟ್ ಸ್ಟ್ರೈಕ್‌ಗಳು ಚಾನೆಲ್ ಡಿಲೀಟ್ ಮಾಡಲು ಕಾರಣವಾಗಬಹುದು.

ಈ ಸಮಸ್ಯೆಯನ್ನು ಹೇಗೆ ಪರಿಹರಿಸಬೇಕೆಂದು ಮಂಗಲ್ ಅವರ ತಂಡ ANI ಅನ್ನು ಸಂಪರ್ಕಿಸಿದೆ. ANI ಉದ್ಯೋಗಿಗಳು ಸ್ಟ್ರೈಕ್‌ಗಳನ್ನು ತೆಗೆದುಹಾಕಲು ಮತ್ತು ANI ನ ದೃಶ್ಯಗಳನ್ನು ಬಳಸಿದ್ದಕ್ಕೆ ಎರಡು ವರ್ಷಗಳ ಸಬ್ಸ್ಕ್ರಿಪ್ಷನ್ ಗಾಗಿ 45 ಲಕ್ಷ ರೂಪಾಯಿ ಮತ್ತು GST ಪಾವತಿಸುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಮಂಗಳ್ ಆರೋಪಿಸಿದ್ದಾರೆ.

ಇಷ್ಟು ದೊಡ್ಡ ಮೊತ್ತದ ಕುರಿತು ವಿವರಗಳನ್ನು ಕೇಳಿದಾಗ, ANI ಪ್ರತಿನಿಧಿಯು ಪ್ರತಿ ಕಾಪಿರೈಟ್ ಸ್ಟ್ರೈಕ್‌ಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದ್ದು, ಎಂಟು ವೀಡಿಯೊಗಳಿಗೆ 40 ಲಕ್ಷ ರೂಪಾಯಿ ವರೆಗೆ ಆಗಿದೆ. ಐಚ್ಛಿಕ ವಾರ್ಷಿಕ ಸಬ್ಸ್ಕ್ರಿಪ್ಷನ್ ಶುಲ್ಕವನ್ನು ಸಹ ನೀಡಲಾಗಿದೆ ಎಂದು ವಿವರಿಸಿದ್ದಾರೆ.

"ನೀವು ಸಬ್ಸ್ಕ್ರಿಪ್ಷನ್ ಒಂದು ವರ್ಷಕ್ಕೆ ಬಯಸಿದರೆ, 30 ಲಕ್ಷ ಪಾವತಿಸಿ. ನೀವು ಸಬ್ಸ್ಕ್ರಿಪ್ಷನ್ 2 ವರ್ಷಗಳವರೆಗೆ ಬಯಸಿದರೆ, 40 ಲಕ್ಷ ಪಾವತಿಸಿ" ಎಂದು ANI ಸಿಬ್ಬಂದಿ ಹೇಳಿರುವುದಾಗಿ ವರದಿಯಾಗಿದೆ. "ನಾವು ಬೇರೆ ವಿಧಾನ, ಆದಾಯವನ್ನು ಕ್ಲೈಮ್ ಮಾಡುವುದಿಲ್ಲ. ನಾವು ಸ್ಟ್ರೈಕ್ ಅನ್ನು ಹಾಕಿದ್ದೇವೆ" ಎಂದು ANI ಸಿಬ್ಬಂದಿ ಹೇಳಿದ್ದಾರೆ.

"ನನಗೆ ಮೋಹಕ್ ಮಂಗಲ್ ಅವರ ಚಾನೆಲ್ ಇಷ್ಟ, ಅದಕ್ಕಾಗಿಯೇ ನಾನು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ" ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ. ಒಪ್ಪಂದವನ್ನು ಮಂಗಲ್ ಅವರಿಗೆ ಸಹಾಯವಾಗುವುದಕ್ಕಾಗಿ ಮಾಡಲಾಗುತ್ತಿದೆ ಎಂಬ ಧೋರಣೆಯನ್ನು ANI ಸಿಬ್ಬಂದಿ ತಾಳಿದ್ದಾರೆ ಎನ್ನಲಾಗಿದೆ.

ಮಂಗಲ್ ಈ ಧೋರಣೆಯನ್ನು ಸುಲಿಗೆ ಎಂದು ಕರೆದಿದ್ದಾರೆ. ANI ಸೈದ್ಧಾಂತಿಕ ಮಾರ್ಗಗಳಲ್ಲಿ ಹಲವಾರು ಕಂಟೆಂಟ್ ಕ್ರಿಯೇಟರ್ ಗಳ ಮೇಲೆ ಇದೇ ರೀತಿಯ ತಂತ್ರಗಳನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ಇತರ ಕಂಟೆಂಟ್ ಕ್ರಿಯೇಟರ್ ಗಳ ಮೇಲೆ 15 ರಿಂದ 22 ಲಕ್ಷ ರೂ.ಗಳ ವರೆಗೆ ಪಾವತಿಸಲು ಕೇಳಲಾಗಿತ್ತು. ಕೆಲವರು ಒಂದು ವರ್ಷಕ್ಕಾಗಿ 50 ಲಕ್ಷ ರೂಪಾಯಿ ಪಾವತಿಸಿದ್ದಾರೆ ಎಂದು ಹೇಳಲಾದ ಪ್ರಕರಣವನ್ನು ಅವರು ಉಲ್ಲೇಖಿಸಿದರು. "ಇದು ಕಾಪಿ ರೈಟ್ ಅಲ್ಲ, ಇದು ಗುಲಾಮಗಿರಿಯ ಮಾತುಕತೆ" ಎಂದು ಮಂಗಲ್ ತಮ್ಮ ವೀಡಿಯೊದಲ್ಲಿ ಹೇಳಿದ್ದಾರೆ. "ನಾನು ಬೇಡಿಕೊಳ್ಳುತ್ತೇನೆ ಎಂದು ANI ಭಾವಿಸಿದೆ. ನಾನು ತಲೆಬಾಗುವುದಿಲ್ಲ," ಎಂದು ಮಂಗಲ್ ಅವರು ಹೇಳಿದ್ದಾರೆ.

ಅನೇಕ ಕಂಟೆಂಟ್ ಕ್ರಿಯೇಟರ್ ಗಳು ANI ಯ ನೀತಿಯನ್ನು ವಿರೋಧಿಸಿದ್ದಾರೆ. ಈ ಕುರಿತು ವಿಡಿಯೋಗಳನ್ನು ಮಾಡಿರುವ ಅವರು, ANI ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಅವರು ಸಚಿವ ಅಶ್ವಿನಿ ವೈಷ್ಣವ್ ಮತ್ತು ಐ & ಬಿ ಕಾರ್ಯದರ್ಶಿ ಸಂಜಯ್ ಜಾಜು ಅವರಿಗೆ ಈ ಮೇಲ್ ಕಳುಹಿಸಿ, ಘಟನೆಯ ಕುರಿತು ವಿವರಿಸಿದ್ದಾರೆ.

Here's how South Asia's Leading Multimedia News Agency and Pro-BJP Propaganda Agency @ANI is squeezing several Youtubers for money while YouTube holds a sword on their content. @YouTubeIndia's copyright policy hands @ANI disproportionate power, enabling them to strong-arm… pic.twitter.com/Cw7uZImgtu

— Mohammed Zubair (@zoo_bear) May 25, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X