Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Fact Check | ರಸ್ತೆ ಮಧ್ಯೆ ಟ್ರಕ್...

Fact Check | ರಸ್ತೆ ಮಧ್ಯೆ ಟ್ರಕ್ ನಿಲ್ಲಿಸಿ ಚಾಲಕ ನಮಾಝ್ ಮಾಡಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿದೆ ಎಂದು ಸುಳ್ಳು ವರದಿ ಮಾಡಿದ ʼಝೀ ನ್ಯೂಸ್ʼ

ವಾರ್ತಾಭಾರತಿವಾರ್ತಾಭಾರತಿ9 March 2025 4:30 PM IST
share
Fact Check | ರಸ್ತೆ ಮಧ್ಯೆ ಟ್ರಕ್ ನಿಲ್ಲಿಸಿ ಚಾಲಕ ನಮಾಝ್ ಮಾಡಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿದೆ ಎಂದು ಸುಳ್ಳು ವರದಿ ಮಾಡಿದ ʼಝೀ ನ್ಯೂಸ್ʼ

ಹೊಸದಿಲ್ಲಿ: ಮಾ.4ರಂದು ಜಮ್ಮುಕಾಶ್ಮೀರದ ರಾಮಬನ್ ಪ್ರದೇಶದಲ್ಲಿ ಟ್ರಕ್ ಚಾಲಕನೋರ್ವ ತನ್ನ ವಾಹನದ ಮೇಲೆ ನಮಾಝ್ ಮಾಡುತ್ತಿದ್ದ ವೀಡಿಯೊವೊಂದನ್ನು ಝೀನ್ಯೂಸ್ ಪ್ರಸಾರ ಮಾಡಿತ್ತು. ಚಾಲಕನು ರಸ್ತೆಬದಿಯಲ್ಲಿ ವಾಹನವನ್ನು ನಿಲ್ಲಿಸುವ ಬದಲು ಮಧ್ಯದಲ್ಲಿ ನಿಲ್ಲಿಸಿ ನಮಾಝ್ ಮಾಡಿದ್ದು ಭಾರೀ ಸಂಚಾರ ದಟ್ಟಣೆಗೆ ಕಾರಣವಾಗಿತ್ತು ಮತ್ತು ಪ್ರಯಾಣಿಕರು ಅನಾನುಕೂಲತೆಗಳನ್ನು ಎದುರಿಸುವಂತಾಗಿತ್ತು ಎಂದು ವಾಹಿನಿಯು ಹೇಳಿಕೊಂಡಿತ್ತು.

ನಿರೂಪಕರು ವೀಡಿಯೊವನ್ನು ಪದೇ ಪದೇ ತೋರಿಸಿದ್ದರು ಮತ್ತು ಟ್ರಕ್ ಚಾಲಕನಿಂದಾಗಿ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು ಒತ್ತಿ ಹೇಳುತ್ತಲೇ ಇದ್ದರು. ಝೀನ್ಯೂಸ್ ವೀಡಿಯೊದ ಸತ್ಯಾಸತ್ಯತೆಯನ್ನು ತಾನು ಸ್ವತಃ ಪರಿಶೀಲಿಸಿಲ್ಲ ಎಂದು ಹೇಳಿಕೊಂಡಿತ್ತಾದರೂ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊ ತುಣುಕನ್ನು ವೀಕ್ಷಿಸಿದ್ದ ಪ್ರತಿಯೊಬ್ಬರೂ ಟ್ರಕ್ ಚಾಲಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.

ಫ್ಯಾಕ್ಟ್ ಚೆಕ್

ವೀಡಿಯೊ ತುಣುಕಿನ ಸತ್ಯಾಸತ್ಯತೆಯನ್ನು ಪರೀಕ್ಷಿಸಲು ಮುಂದಾದ ಸತ್ಯಶೋಧಕ ವೆಬ್ ಸೈಟ್ altnews.in ಕೀ ವರ್ಡ್‌ಗಳನ್ನು ಬಳಸಿ ಜಾಲಾಡಿದಾಗ ಮಾ.2ರಂದು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾಗಿದ್ದ ಹಲವಾರು ಸಂಬಂಧಿತ ವೀಡಿಯೊಗಳು ಕಂಡುಬಂದಿದ್ದವು. ಈ ಪೈಕಿ ಫೇಸ್‌ಬುಕ್ ಬಳಕೆದಾರ ಭಟ್ ಸಾಜದ್ ಶೇರ್ ಮಾಡಿಕೊಂಡಿದ್ದ ವೀಡಿಯೊ ಕೂಡ ಇದ್ದು,‘ರಮಝಾನ್ ತಿಂಗಳ ಮೊದಲ ದಿನದಂದು ರಾಮಬನ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಚಾಲಕನೋರ್ವ ತನ್ನ ವಾಹನದ ಮೇಲ್ಭಾಗದಲ್ಲಿ ನಮಾಝ್ ಮಾಡುತ್ತಿದ್ದಾನೆ ’ ಎಂಬ ಅಡಿಬರಹವನ್ನು ನೀಡಲಾಗಿತ್ತು.

ನ್ಯಾಷನಲ್ ಹೈವೇ ಅಪ್‌ಡೇಟ್ಸ್ ಎನ್‌ಎಚ್ ಎಂಬ ಫೇಸ್‌ಬುಕ್ ಪೇಜ್‌ನಲ್ಲಿಯೂ ಇಂತಹುದೇ ವೀಡಿಯೊ ಪೋಸ್ಟ್ ಮಾಡಲಾಗಿದ್ದು,‘ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಸಮಯದಲ್ಲಿ ವ್ಯಕ್ತಿ ಟ್ರಕ್‌ನ ಮೇಲ್ಭಾಗದಲ್ಲಿ ನಮಾಝ್ ಮಾಡುತ್ತಿದ್ದಾನೆ’ ಎಂಬ ಅಡಿಬರಹವನ್ನು ಅದು ಹೊಂದಿತ್ತು.

ಆಲ್ಟ್‌ನ್ಯೂಸ್ ವೀಡಿಯೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಚಾಲಕ ನಮಾಜ್ ಮಾಡುತ್ತಿದ್ದ ಟ್ರಕ್‌ನ ಎದುರಿನ ರಸ್ತೆಯಲ್ಲೂ ಸಂಚಾರ ದಟ್ಟಣೆ ಇತ್ತು, ಹೀಗಾಗಿ ಚಾಲಕ ನಮಾಝ್ ಗಾಗಿ ಟ್ರಕ್ ನಿಲ್ಲಿಸಿದ್ದರಿಂದ ವಾಹನ ದಟ್ಟಣೆಯುಂಟಾಗಿರಲಿಲ್ಲ,ಸ್ವತಃ ಆತನೇ ಸಂಚಾರ ದಟ್ಟಣೆಯಲ್ಲಿ ಸಿಕ್ಕಿಕೊಂಡಿದ್ದ ಎನ್ನುವುದು ಸ್ಪಷ್ಟವಾಗಿದೆ.

ವಾಸ್ತವದಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಫೆ.27ರಿಂದ ಪ್ರತಿಕೂಲ ಹವಾಮಾನ ಮತ್ತು ಭೂಕುಸಿತಗಳಿಂದಾಗಿ ವಾಹನಗಳ ಸಂಚಾರಕ್ಕೆ ಹಲವಾರು ತೊಡಕುಗಳು ಉಂಟಾಗಿದ್ದವು. ಫೆ.28ರಂದು ರಾಮಬನ್‌ನಲ್ಲಿ ರಸ್ತೆಯ ಒಂದು ಭಾಗವು ಕುಸಿದಿತ್ತು. ದುರಸ್ತಿ ಕಾರ್ಯ ಮತ್ತು ಸಿಂಗಲ್ ಲೇನ್ ವ್ಯವಸ್ಥೆಗೊಳಿಸಿದ್ದರಿಂದ ಮಾ.1 ಮತ್ತು 3ರ ನಡುವೆ ಸಂಚಾರವನ್ನು ತಡೆಹಿಡಿಯಲಾಗಿತ್ತು ಮತ್ತು ಇದರಿಂದಾಗಿ ವಾಹನಗಳು ನಿಂತಲ್ಲೇ ನಿಲ್ಲುವಂತಾಗಿತ್ತು ಎನ್ನುವುದನ್ನು ಜಮ್ಮುಕಾಶ್ಮೀರ ಸಂಚಾರ ಪೋಲಿಸ್‌ನ ಎಕ್ಸ್ ಹ್ಯಾಂಡಲ್ ಹಂಚಿಕೊಂಡಿದ್ದ ಹಲವಾರು ಅಪ್‌ಡೇಟ್‌ಗಳಿಂದ ಆಲ್ಟ್‌ನ್ಯೂಸ್ ಕಂಡುಕೊಂಡಿದೆ.

ಹಿಂದುಸ್ಥಾನ ಟೈಮ್ಸ್,ಎಎನ್‌ಐ ಮತ್ತು ಕೆಲವು ಸ್ಥಳೀಯ ಸುದ್ದಿಸಂಸ್ಥೆಗಳೂ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಚ್ಚಿದ್ದನ್ನು ವರದಿ ಮಾಡಿದ್ದವು.

ಕೃಪೆ: altnews.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X