Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಸತ್ ಸದನದಲ್ಲಿ ಭಾಷಣ ಜೀವಮಾನದ ನೆನಪು:...

ಸಂಸತ್ ಸದನದಲ್ಲಿ ಭಾಷಣ ಜೀವಮಾನದ ನೆನಪು: ಮಂಗಳೂರಿನ ಪ್ರತಿಭೆ ಸೌರವ್ ಸಾಲ್ಯಾನ್ ಅನಿಸಿಕೆ

ವಾರ್ತಾಭಾರತಿವಾರ್ತಾಭಾರತಿ5 Oct 2023 3:16 PM IST
share

ಮಂಗಳೂರು, ಅ.5: ದೆಹಲಿಯ ಹಳೆ ಸಂಸತ್ ಭವನದಲ್ಲಿ ಭಾಷಣ ಮಾಡಲು ದೊರಕಿರುವ ಅವಕಾಶ ಜೀವಮಾನದ ನೆನಪಿನ ಕ್ಷಣ ಎಂದು ಮಂಗಳೂರಿನ ಸೌರವ್ ಸಾಲ್ಯಾನ್ ಸಂತಸ ವ್ಯಕ್ತಪಡಿಸಿದ್ದಾರೆ.

ಗಾಂಧೀ ಜಯಂತಿ ಪ್ರಯುಕ್ತ ದೆಹಲಿಯ ಸಂಸತ್ ಭವನದಲ್ಲಿ ಭಾಷಣ ಮಾಡಲು ರಾಜ್ಯದಿಂದ ಆಯ್ಕೆಯಾಗಿದ್ದ ಮಂಗಳೂರಿನ ಯುವ ಪ್ರತಿಭೆ ಸೌರವ್ ಸಾಲ್ಯಾನ್ ಕೆನರಾ ಕಾಲೇಜಿನಲ್ಲಿ ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿ. ಕಲಾವಿದನೂ ಆಗಿರುವ ಸೌರವ್ ಅವರು ಕರ್ನಾಟಕ ಕಲಾಶ್ರೀ, ರಾಜ್ಯೋತ್ಸವ ಸಾಧಕ ಪುರಸ್ಕಾರ, ಕರ್ನಾಟಕ ಪ್ರತಿಭಾ ರತ್ನ ಮೊದಲಾದ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಪ್ರೆಸ್ಕ್ಲಬ್ನಲ್ಲಿ ಗುರುವಾರ ದೆಹಲಿ ಸಂಸತ್ ಭವನದಲ್ಲಿನ ತಮ್ಮ ಅನುಭವ ಹಂಚಿಕೊಂಡ ಸೌರವ್, ಲಾಲ್ಬಹಾದ್ದೂರ್ ಶಾಸ್ತ್ರಿ ಅವರ ಜೀವನ ಪಾಠದ ಬಗ್ಗೆ ಮಾತುಗಳನ್ನು ಆಡಿದ್ದಾಗಿ ಹೇಳಿದರು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ಬಗ್ಗೆ ಧೈರ್ಯ ಇತ್ತಾದರೂ, ರಾಜ್ಯ ಮಟ್ಟದಿಂದ ಆಯ್ಕೆಯಾಗಿ ಸಂಸತ್ ಭವನಕ್ಕೆ ಹೋಗಲು ಅವಕಾಶ ಪಡೆಯುವ ಬಗ್ಗೆ ಕಿಂಚಿತ್ತೂ ವಿಶ್ವಾಸವಿರಲಿಲ್ಲ. ಆದರೆ ಅಂತಹ ಅವಕಾಶಕ್ಕೆ ನನ್ನ ಅಜ್ಜಿಯ ಪ್ರೇರಣೆಯೇ ಪ್ರಮುಖ ಕಾರಣ ಎಂದವರು ಹೇಳಿದರು.

ಜೀವನದಲ್ಲಿ ಮೊದಲ ಬಾರಿಗೆ ದೆಹಲಿಯ ಸಂಸತ್ಗೆ ಹೋಗಲು ವಿಮಾನ ಹತ್ತಲು ಅವಕಾಶ ದೊರೆಯಿತು. ಅಲ್ಲಿ ಅತ್ಯುತ್ತಮ ವ್ಯವಸ್ಥೆಯಡಿ ತಂಗುವ ವ್ಯವಸ್ಥೆಯೂ ದೊರಕಿತ್ತು. ಹಳೆ ಸಂಸತ್ ಭವನದಲ್ಲಿ ಮಾತನಾಡುವ ಜತೆಗೆ ಹೊಸ ಸಂಸತ್ ಭವನವನ್ನು ನೋಡುವ ಅವಕಾಶವೂ ದೊರೆಯಿತು. ಇದರ ಜತೆಗೆ ರಾಜ್ಘಾಟ್, ಇಂಡಿಯಾ ಗೇಟ್ಗೆ ನಮ್ಮನ್ನು ಕರೆದೊಯ್ಯಲಾಗಿತ್ತು. ನನ್ನ ತಾಯಿ, ತಾಯಿ ಸ್ನೇಹಿತೆ ಹಾಗೂ ನನ್ನ ಗೆಳೆಯನೊಂದಿಗೆ ದೆಹಲಿಗೆ ಹೋಗಿದ್ದೆ. ದೆಹಲಿಯೆಂದರೆ ಮಾಲಿನ್ಯ ಭರಿತ ನಗರ ಎಂಬ ಕಲ್ಪನೆ ನನ್ನದಾಗಿತ್ತು. ಆದರೆ, ಅಲ್ಲಿ ಆರಂಭದಲ್ಲಿ ನೋಡಿದ ದಿಲ್ಲಿ ಅತ್ಯಂತ ಸುಂದರ ಮತ್ತು ಸ್ವಚ್ಛವಾಗಿತ್ತು. ಆದರೆ ಕಾರ್ಯಕ್ರಮದ ಮುಗಿದ ಬಳಿಕ ತಾಯಿ ಹಾಗೂ ಸ್ನೇಹಿತರ ಜತೆ ದೆಹಲಿ ಸುತ್ತಿದಾಗ ದೆಹಲಿಯ ಕತ್ತಲಿನ ಭಾಗದ ಅನಾವರಣವೂ ಆಯಿತು ಎಂದು ಸೌರವ್ ಹೇಳಿದರು.

ಆಂಗ್ಲ ಭಾಷೆಯ ಉಪನ್ಯಾಸಕನಾಗಬೇಕೆಂಬುದು ನನ್ನ ಕನಸು. ಆಂಗ್ಲ ಭಾಷೆಯ ಟ್ಯೂಶನ್ ನೀಡುತ್ತಾ ನನ್ನ ಶಿಕ್ಷಣ ಪಡೆಯುತ್ತಿದ್ದೇನೆ. ಉಪನ್ಯಾಸಕನಾಗುವ ಕನಸಿನ ಜತೆಗೆ ಬರಹಗಾರನಾಗಬೇಕೆಂಬ ಇರಾದೆಯೂ ಇದೆ ಎಂದು ಸೌರವ್ ಹೇಳಿದರು.

ಸೌರವ್ ಬಾಲ್ಯದಿಂದಲೇ ಮಾತುಗಾರ. ವಿವಿಧ ರೀತಿಯ ಕಲೆಯ ಬಗ್ಗೆಯೂ ಆಸಕ್ತಿ ಹೊಂದಿರುವ ಆತ ಎಸೆಸೆಲ್ಸಿಯಲ್ಲಿ ಶೇ. 92.8 ಹಾಗೂ ಪಿಯುಸಿಯಲ್ಲಿ ಶೇ. 97.7 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿಯೂ ಉತ್ತಮ ನಿರ್ವಹಣೆ ತೋರುತ್ತಿದ್ದಾನೆ ಎಂದು ಸೌರವ್ ತಾಯಿ ಪುಷ್ಪಾವತಿ ಹೇಳಿದರು.

ಸೌರವ್ ಸಾಧನೆ ಜಿಲ್ಲೆಯ ಜತೆಗೆ ರಾಜ್ಯಕ್ಕೆ ಹೆಮ್ಮೆ ತಂದಿದೆ ಎಂದು ನೆಹರೂ ಯುವ ಕೇಂದ್ರದ ಜಗದೀಶ್ ಕೆ., ಕೆನರಾ ಕಾಲೇಜು ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ., ಆಡಳಿತಾಧಿಕಾರಿ ಡಾ. ದೀಪ್ತಿ ನಾಯಕ್, ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸೀಮಾ ಪ್ರಭು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಿಯಾ ಸುದೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X