Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ನಿಲ್ದಾಣ ವ್ಯವಹಾರದಲ್ಲಿ ರೂ. 96...

ವಿಮಾನ ನಿಲ್ದಾಣ ವ್ಯವಹಾರದಲ್ಲಿ ರೂ. 96 ಸಾವಿರ ಕೋಟಿ ಹೂಡಿಕೆ ಮಾಡಲಿರುವ ಅದಾನಿ ಸಮೂಹ

ವಾರ್ತಾಭಾರತಿವಾರ್ತಾಭಾರತಿ21 July 2025 7:59 AM IST
share
ವಿಮಾನ ನಿಲ್ದಾಣ ವ್ಯವಹಾರದಲ್ಲಿ ರೂ. 96 ಸಾವಿರ ಕೋಟಿ ಹೂಡಿಕೆ ಮಾಡಲಿರುವ ಅದಾನಿ ಸಮೂಹ

ಅಹ್ಮದಾಬಾದ್: ಮುಂಬೈ ಸಿಎಸ್ಎಂಐಎ, ಮುಂದಿನ ಅಕ್ಟೋಬರ್ ನಲ್ಲಿ ಸೇರ್ಪಡೆಯಾಗಲಿರುವ ನವ ಮುಂಬೈ ಸೇರಿದಂತೆ ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳನ್ನು ನಿರ್ವಹಿಸುತ್ತಿರುವ ಅದಾನಿ ಸಮೂಹ ಮುಂದಿನ ಐದು ವರ್ಷಗಳಲ್ಲಿ ವಿಮಾನ ನಿಲ್ದಾಣ ವ್ಯವಹಾರಗಳಲ್ಲಿ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಲು ನಿರ್ಧರಿಸಿದೆ. ಇದಲ್ಲಿ ಮೂಲಸೌಕರ್ಯ ಮತ್ತು ರಿಯಲ್ ಎಸ್ಟೇಟ್ ಅಭಿವೃದ್ಧಿ ಸೇರಿದೆ.

ಈ ಬಗ್ಗೆ ಅದಾನಿ ಸಮೂಹದ ವಿಮಾನ ನಿಲ್ದಾಣಗಳ ವ್ಯವಹಾರದ ಮುಖ್ಯಸ್ಥ, ಗೌತಮ್ ಅದಾನಿಯವರ ಮಗ ಜೀತ್ ಅದಾನಿ (27) ಭಾರತದಲ್ಲಿ ಈ ಕ್ಷೇತ್ರದಲ್ಲಿ ವ್ಯಾಪಕ ಅವಕಾಶಗಳಿದ್ದು, ವಿದೇಶಗಳಲ್ಲಿ ವಿಸ್ತರಣೆಯ ಯಾವುದೇ ಯೋಜನೆ ಸದ್ಯಕ್ಕಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ಮುಂದಿನ ಐದು ವರ್ಷ ಜಾರಿಯಾಗಲಿರುವ ಯೋಜನೆಗಳಲ್ಲಿ ವಿಮಾನ ನಿಲ್ದಾಣ ಪರಿಸರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ರಿಯಲ್ ಎಸ್ಟೇಟ್ ಅಭಿವೃದ್ಧಿಯಲ್ಲಿ 95 ಸಾವಿರದಿಂದ 96 ಸಾವಿರ ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲು ಉದ್ದೇಶಿಸಲಾಗಿದೆ. ಈ ಪೈಕಿ ನವ ಮುಂಬೈ ವಿಮಾನ ನಿಲ್ದಾಣ, ಮುಂಬೈ ವಿಮಾನ ನಿಲ್ದಾಣ ಹಾಗೂ ಈ ಎರಡು ಕಡೆಗಳಲ್ಲಿ ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ದೊಡ್ಡ ಪಾಲು ವಿನಿಯೋಗವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಮುಂದಿನ ನಾಲ್ಕು ವರ್ಷಗಳಲ್ಲಿ ಅಹ್ಮದಾಬಾದ್, ಜೈಪುರ ಮತ್ತು ತಿರುವನಂತಪುರಗಳಲ್ಲಿ ಹೊಸ ಟರ್ಮಿನಲ್ ಗಳ ನಿರ್ಮಾಣ ಯೋಜನೆಗಳು ಪ್ರಮುಖವಾಗಿವೆ. ಲಕ್ನೋದಲ್ಲಿ ಹೊಸದಾಗಿ ನಿರ್ಮಿಸಿದ ಟರ್ಮಿನಲ್ ವಿಸ್ತರಿಸಲಾಗುತ್ತಿದೆ. ಗುವಾಹತಿಯಲ್ಲಿ ನಿರ್ಮಾಣವಾಗಿರುವ ಹೊಸ ಟರ್ಮಿನಲ್ ಈ ವರ್ಷದ ಅಕ್ಟೋಬರ್-ನವೆಂಬರ್ ವೇಳೆಗೆ ಕಾರ್ಯಾಚರಣೆ ಆರಂಭಿಸಲಿವೆ ಎಂದು ವಿವರಿಸಿದರು.

ದೇಶದ ಹೊರಗೆ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆ ಬಗ್ಗೆ ಕೇಳಿದಾಗ, ತಕ್ಷಣಕ್ಕೆ ಯಾವುದೇ ಯೋಚನೆ ಇಲ್ಲ; ಏಕೆಂದರೆ ಭಾರತದಲ್ಲೇ ವಿಪುಲ ಅವಕಾಶಗಳಿವೆ. ಆದ್ದರಿಂದ ಹೊರಗೆ ಗಮನ ಹರಿಸುವ ಇಚ್ಛೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Tags

Adani Groupairport business
share
ವಾರ್ತಾಭಾರತಿ
ವಾರ್ತಾಭಾರತಿ
Next Story
X