Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಹಿಳೆ, ಮಕ್ಕಳ ಸುರಕ್ಷತೆಗೆ ಇದೀಗ ಅಕ್ಕ...

ಮಹಿಳೆ, ಮಕ್ಕಳ ಸುರಕ್ಷತೆಗೆ ಇದೀಗ ಅಕ್ಕ ಪಡೆ ಸಾರಥ್ಯ

ಸಾಜಿದ್‌ ಅಲಿಸಾಜಿದ್‌ ಅಲಿ9 Jan 2026 3:08 PM IST
share
ಮಹಿಳೆ, ಮಕ್ಕಳ ಸುರಕ್ಷತೆಗೆ ಇದೀಗ ಅಕ್ಕ ಪಡೆ ಸಾರಥ್ಯ
ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ವಿನೂತನ ಯೋಜನೆ

ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗೃಹ ಇಲಾಖೆಯ ಸಹಯೋಗದೊಂದಿಗೆ ಅಕ್ಕ ಪಡೆ ಯೋಜನೆ ರಾಜ್ಯಾದ್ಯಂತ ಜಾರಿಗೆ ತಂದಿದೆ.

ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ಅತ್ಯಾಚಾರ, ಲೈಂಗಿಕ ಕಿರುಕುಳ, ಮಾನವ ಕಳ್ಳ ಸಾಗಣೆ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ, ಪೊಕ್ಸೊ ಸೇರಿ ಇತರ ಕೃತ್ಯ ತಡೆಯಲು ಸಂರಕ್ಷಣೆ ಅಕ್ಕಪಡೆ ಶ್ರಮಿಸಲಿದೆ. ಅವರ ಮೇಲೆ ಮಾನಸಿಕ, ದೈಹಿಕವಾಗಿ ಮತ್ತು ಸಾಮಾಜಿಕ ಹಿಂಸೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನಿಸಿದ ಸರ್ಕಾರ ಕಾನೂನು ಅರಿವು ಮೂಡಿಸಿ ಅವರ ಸಂರಕ್ಷಣೆ ಮಾಡುವಂತೆ ಅಕ್ಕಪಡೆಗೆ ನಿರ್ದೇಶನ ನೀಡಿದೆ.

ಜಿಲ್ಲಾ ಮತ್ತು ಕಮಿಷನರೇಟ್ ಮಟ್ಟದದಲ್ಲಿ ಅಕ್ಕ ಪಡೆ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಪೊಲೀಸ್ ಕಮಿಷನರ್ ಅಧ್ಯಕ್ಷರಾಗಿರುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಉಪಾಧ್ಯಾಕ್ಷರಾಗಿರುತ್ತಾರೆ. ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಹಾಗೂ ಮಹಿಳೆ ಪೊಲೀಸ್ ಇಲಾಖೆಯ ಉಪಾಧೀಕ್ಷಕರು ಸಮಿತಿಯ ಸದಸ್ಯರಾಗಿರುತ್ತಾರೆ.

ಅಕ್ಕ ಪಡೆ ರಚನೆ; ಅಕ್ಕಪಡೆ ತಂಡದಲ್ಲಿ ನಾಲ್ವರು ಸದೃಢವಾಗಿರುವ 35 ವರ್ಷದೊಳಗಿನ ಮಹಿಳಾ ಹೋಂಗಾರ್ಡ್‌ಗಳನ್ನು ನೇಮಿಸಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜ್ಯನಗಳ ಕುರಿತು ಸಂಪೂರ್ಣ ತರಬೇತಿ ನೀಡಲಾಗುತ್ತದೆ. ಗಸ್ತು ಸಂಚರಿಸಲು ಬೊಲೆರೊ ವಾಹನ, ಹೋಂಗಾರ್ಡ್ಗಳಿಗೆ ಕಮಾಂಡೋ ಸಮವಸ್ತ್ರವಿರುತ್ತದೆ.

ಕರ್ತವ್ಯದ ವಿವರ; ಪಾಳಿಯಲ್ಲಿ 2 ಹೋಂಗಾರ್ಡ್‌ಗಳು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2ರವರೆಗೆ, ಮಧ್ಯಾಹ್ನ 2ರಿಂದ ರಾತ್ರಿ 10ರವರೆಗೆ ಜಿಲ್ಲಾ ಮತ್ತು ತಾಲೂಕುಮಟ್ಟದಲ್ಲಿ ರಾತ್ರಿ 8 ರ ವರೆಗೆ ಎರಡನೇ ಪಾಳಿಯಲ್ಲಿ ಠಾಣೆಯ ಪಿಐ ಉಸ್ತುವಾರಿಯಲ್ಲಿ ಮಹಿಳಾ ಕಾನ್ಸಟೇಬಲ್ ಜೊತೆಗೆ ಗಸ್ತು ತಿರುಗುತ್ತಾರೆ.

ರಾಜ್ಯಾದ್ಯಂತ ಅಕ್ಕಮಹಾದೇವಿ ಹೆಸರಲ್ಲಿ ಪಡೆ ಜಾರಿಗೆ ತಂದಿದ್ದು ಸ್ವಾಗತಾರ್ಹ. ಅಕ್ಕ ಎಂಬುದು ನಿರ್ಭಯ ಮತ್ತು ನಿರ್ಭಯದ ಸಂಕೇತ. ಸಶಕ್ತರಿಗೆ ತರಬೇತಿ ನೀಡಿ ಅಕ್ಕಪಡೆ ಕಾರ್ಯಾಚರಣೆಗಿಳಿದಲ್ಲಿ ಮಾತ್ರ ಮಹಿಳೆ ಮತ್ತು ಮಕ್ಕಳ ದೌರ್ಜನ್ಯ ಚೂರು ನಿಯಂತ್ರಣ ಸಾಧ್ಯ.

-ಮೀನಾಕ್ಷಿ ಬಾಳಿ, ಉಪಾಧ್ಯಕ್ಷೆ, ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆ

ಮಹಿಳೆಯರ ಮತ್ತು ಮಕ್ಕಳ ದೌರ್ಜನ್ಯ ತಡೆಯಲು ಸಾರ್ವಜನಿಕ ಸ್ಥಳಗಳಾದ ಶಾಪಿಂಗ್ ಮಾಲ್, ರೈಲ್ವೆ, ಬಸ್ ನಿಲ್ದಾಣ, ಮಾರ್ಕೆಟ್ ಸೇರಿ ಇತರ ಸ್ಥಳಗಳಲ್ಲಿ ಅಕ್ಕಪಡೆ ಕೆಲಸ ಮಾಡುತ್ತದೆ. ಅಹಿತಕರ ಘಟನೆ ಸಂಭವಿಸಿದಲ್ಲಿ ಕೂಡಲೇ ಜಿಲ್ಲಾ ಕಮಿಷನರೇಟ್ ವ್ಯಾಪ್ತಿಯ ನಿಯಂತ್ರಣ ಕೊಠಡಿಗೆ ಮಾಹಿತಿ ಬರುತ್ತದೆ. ಕಲಬುರಗಿಯಲ್ಲಿಯೂ ಅಕ್ಕಪಡೆ ನಿಯೋಜನೆಗೆ ಸಿದ್ಧತೆ ಕೈಗೊಳ್ಳುತ್ತಿದ್ದೇವೆ.

-ಶರಣಪ್ಪ ಎಸ್.ಡಿ, ನಗರ ಪೊಲೀಸ್ ಆಯುಕ್ತರು ಕಲಬುರಗಿ

Tags

akka padewomenchildren
share
ಸಾಜಿದ್‌ ಅಲಿ
ಸಾಜಿದ್‌ ಅಲಿ
Next Story
X