×
Ad

ಕಾನೂನು ಅರಿವು ಉತ್ತಮ ಸಮಾಜದ ಬುನಾದಿ: ಜೈಬುನ್ನೀಸಾ

Update: 2025-08-23 20:12 IST

ಮಂಗಳೂರು, ಆ.23: ಯಾವುದೇ ಸಮಸ್ಯೆಗಳಿಲ್ಲದ ಉತ್ತಮ ಸಮಾಜ ರೂಪುಗೊಳ್ಳಲು ಪ್ರತಿಯೊಬ್ಬ ನಾಗರಿಕರು ಅಗತ್ಯ ಕಾನೂನು ಮಾಹಿತಿ ಹೊಂದಿರಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದ್ದಾರೆ.

ನಗರದ ಬಲ್ಮಠ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ಉಲ್ಲಂಘನೆಯ ಪರಿಣಾಮವನ್ನು ಅರಿತರೆ ನಾವು ಯಾವುದೇ ಸಮಸ್ಯೆ ಉಂಟು ಮಾಡಲು ಸಾಧ್ಯವಿಲ್ಲ. ಇದರಿಂದ ಸಮಾಜವೂ ಸುಧಾರಣೆಗೊಂಡು ನಾಗರಿಕರು ನೆಮ್ಮದಿಯಿಂದ ಬದುಕಬಹುದು ಎಂದು ಜೈಬುನ್ನಿಸಾ ಹೇಳಿದರು.

ಕಾರ್ಯಕ್ರಮದಲ್ಲಿ ಖಾಯಂ ಜನತಾ ನ್ಯಾಯಾಲಯದ ಕುರಿತು ನ್ಯಾಯವಾದಿ ಫಝ್ಲುಲ್ ರಹಮಾನ್, ಮೂಲಭೂತ ಹಕ್ಕುಗಳು ಮತ್ತು ಮಧ್ಯಸ್ಥಿಕೆ ಕುರಿತು ಸಹಾಯಕ ಕಾನೂನು ಅಭಿರಕ್ಷಕಿ ಸುಪ್ರಿತಾ, ಮೂಲಭೂತ ಕರ್ತವ್ಯಗಳು ಮತ್ತು ಲೋಕ ಅದಾಲತ್ ಕುರಿತು ಸಹಾಯಕ ಕಾನೂನು ಅಭಿರಕ್ಷಕಿ ಅಶ್ವಿನಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ವನಿತಾ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಯಶೋಧಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News