×
Ad

‘ಮಂಗಳೂರು ದಸರಾ' ಶೋಭಾಯಾತ್ರೆ ಸಮಾರೋಪ

Update: 2025-10-03 12:41 IST

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಗುರುವಾರ ಸಂಜೆ ಆರಂಭಗೊಂಡ ‘ಮಂಗಳೂರು ದಸರಾ’ಶೋಭಾಯಾತ್ರೆ ಶುಕ್ರವಾರ ಮುಂಜಾನೆ ಸಮಾಪನಗೊಂಡಿತು.

ಗುರುವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಶುಕ್ರವಾರ ಮುಂಜಾನೆ ಕುದ್ರೋಳಿಗೆ ಆಗಮಿಸಿತು. ಬೆಳಗ್ಗೆ ಜಲಸ್ತಂಭನವಾಯಿತು. ಈ ಮೂಲಕ ಮಂಗಳೂರು ದಸರಾ ಮೆರವಣಿಗೆ ಸಮಾಪನಗೊಂಡಿತು.

ಶೋಭಾಯಾತ್ರೆಯುದ್ದಕ್ಕೂ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ನಾರಾಯಣ ಗುರು ಸರ್ಕಲ್, ಲಾಲ್ಬಾಗ್, ಬಲ್ಲಾಳ್ ಬಾಗ್, ಪಿವಿಎಸ್ ವೃತ್ತ, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ಸ್ಟ್ರೀಟ್, ಅಳಕೆ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ನಗರದ 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿತು.

ಹುಲಿವೇಷ ಸಹಿತ ವಿಭಿನ್ನ ರೀತಿಯ ಸ್ತಬ್ಧಚಿತ್ರ, ವಿವಿಧ ದೇವಸ್ಥಾನಗಳು, ಸಂಘ ಸಂಸ್ಥೆಗಳ 70ಕ್ಕೂ ಅಧಿಕ ಸ್ತಬ್ಧಚಿತ್ರಗಳು ಗಮನ ಸೆಳೆದವು. ವಿವಿಧ ಕಲಾತಂಡಗಳ ಪ್ರದರ್ಶನ ಆಕರ್ಷಣೀಯವಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News