×
Ad

ಅ.10: ಯುನಿವೆಫ್ ನಿಂದ ಬಜ್ಪೆಯಲ್ಲಿ ಸೀರತ್ ಸಮಾವೇಶ

Update: 2025-10-09 09:41 IST

ಮಂಗಳೂರು: ಯುನಿವೆಫ್ ಕರ್ನಾಟಕ 19 ಸೆಪ್ಟಂಬರ್ 2025ರಿಂದ 2 ಜನವರಿ 2026ರವರೆಗೆ 'ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ.)' ಎಂಬ ಕೇಂದ್ರೀಯ ವಿಷಯದಲ್ಲಿ 100 ದಿನಗಳ ಕಾಲ ಹಮ್ಮಿಕೊಂಡಿರುವ 20ನೇ ವರ್ಷದ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಅಭಿಯಾನದ ಸೀರತ್ ಸಮಾವೇಶವು ಅ.10ರಂದು ಸಂಜೆ 7ಕ್ಕೆ ಬಜ್ಪೆ ಪೆಟ್ರೋಲ್ ಬಂಕ್ ಬಳಿ ಇರುವ ಲೈಕೋರಿಸ್ ಫ್ಲ್ಯಾಟ್ ಮುಂಭಾಗದಲ್ಲಿ ಜರುಗಲಿದೆ.

ದ. ಕ. ಮುಸ್ಲಿಮ್ ಜನಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಸಿರಾಜ್ ಬಜ್ಪೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ 'ಶೋಷಣೆಯ ವಿರುದ್ಧ ಪ್ರವಾದಿ (ಸ)ಯ ನಡೆ' ಎಂಬ ವಿಷಯದಲ್ಲಿ ಬ್ಯಾರಿ ಭಾಷೆಯಲ್ಲಿ ಭಾಷಣ ಮಾಡಲಿದ್ದಾರೆ ಎಂದು ಅಭಿಯಾನ ಸಂಚಾಲಕ ಯು. ಕೆ. ಖಾಲಿದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News