×
Ad

ಸೆ.14: ಎಂ.ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ 'ಧರ್ಮ ಜಾಗೃತಿ ಯಾತ್ರೆ

Update: 2025-09-12 22:12 IST

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ಸೆ.14ರಂದು 'ಧರ್ಮ ಜಾಗೃತಿ ಯಾತ್ರೆ'ನಡೆಯಲಿದೆ. ಈ ಯಾತ್ರೆಯಲ್ಲಿ 1500ಕ್ಕೂ ಅಧಿಕ ಸಹಕಾರಿ ಸಂಘಗಳು, 3000ಕ್ಕೂ ಅಧಿಕ ವಾಹನಗಳು ಭಾಗಿಯಾಗಲಿವೆ. ಸೆ.14ರಂದು ಮಧ್ಯಾಹ್ನ 12 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಯಾತ್ರೆ ನಡೆಯಲಿದೆ ಎಂದು ಸಂಘಟಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.

ಸಹಬಾಳ್ವೆಯ ಪ್ರತೀಕವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪಾರಂಪರ್ಯವನ್ನು ಹೊಂದಿರುವ ಪವಿತ್ರ ಕ್ಷೇತ್ರ. ಇಂತಹ ಪಾವಿತ್ರ್ಯತೆಯ, ಪೂಜನೀಯ ಕ್ಷೇತ್ರಕ್ಕೆ ಕಳಂಕ ತರುತ್ತಿರುವ ದುಷ್ಟಶಕ್ತಿಗಳ ಷಡ್ಯಂತರವನ್ನು ವಿರೋಧಿಸಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳು ಪಕ್ಷಾತೀತವಾಗಿ ಹಾಗೂ ಜಾತ್ಯತೀತ ವಾಗಿ ಒಗ್ಗಟ್ಟಾಗಿ, 'ಸಹಕಾರ ರತ್ನ' ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ 'ಧರ್ಮ ಜಾಗೃತಿ ಯಾತ್ರೆ'ಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಿಧದ ಸಹಕಾರಿ ಸಂಘಗಳ ಪದಾಧಿಕಾರಿಗಳು, ಸದಸ್ಯರು ಗಳು ಉಜಿರೆಯಲ್ಲಿ ಒಟ್ಟುಸೇರಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ ನಡೆಸಲಿದ್ದಾರೆ. ಇದರಲ್ಲಿ ಸುಮಾರು 1500ಕ್ಕೂ ಅಧಿಕ ಸಹಕಾರಿ ಸಂಘಗಳ 3000ಕ್ಕೂ ಅಧಿಕ ವಾಹನಗಳಲ್ಲಿ ಸಹಕಾರಿ ಗಳು ಧರ್ಮಯಾತ್ರೆ ಮಾಡಲಿದ್ದಾರೆ. ಇದೊಂದು ಧರ್ಮ ಸಂರಕ್ಷಣೆಯ ಯಾತ್ರೆಯಾಗಿದೆ. ಧಾರ್ಮಿಕ ಕ್ಷೇತ್ರಗಳ ವಿರುದ್ಧ ಅಪಪ್ರಚಾರ ಮಾಡುವ ಷಡ್ಯಂತ್ರಿಗಳ ವಿರುದ್ಧ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳು ಯಾವಾಗಲೂ ಸೌಹಾರ್ದತೆಯಿಂದ, ಪರಸ್ಪರ ಸಹಬಾಳ್ವೆಯಿಂದ ಕಾರ್ಯ ನಿರ್ವಹಿಸುತ್ತಿವೆ. ಪವಿತ್ರ ಧರ್ಮಸ್ಥಳ ಕ್ಷೇತ್ರದ ಮೇಲೆ ವಿಶೇಷ ಗೌರವ, ಶ್ರದ್ಧಾ ಭಕ್ತಿಯನ್ನು ಸಹಕಾರ ಕ್ಷೇತ್ರ ಹೊಂದಿದೆ. ಹಾಗಾಗಿ, ಈ ಧರ್ಮ ಕ್ಷೇತ್ರಕ್ಕೆ ಅಪಚಾರವಾಗವೆಸಗುವವರಿಗೆ ಸ್ಪಷ್ಟ ಸಂದೇಶವನ್ನು ನೀಡುವ ಚಾರಿತ್ರಿಕ ಯಾತ್ರೆ ಈ ಧರ್ಮ ಜಾಗೃತಿ ಯಾತ್ರೆ ಆಗಬೇಕಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಸಹಕಾರ ಕ್ಷೇತ್ರಕ್ಕೆ ವಿಶೇಷ ಕೊಡುಗೆ ಲಭಿಸಿದೆ. ಸಹಕಾರ ಕ್ಷೇತ್ರ ಸರ್ವ ಧರ್ಮಕ್ಕೂ ಗೌರವ ನೀಡುವ ಕ್ಷೇತ್ರ ಆಗಿರುವುದರಿಂದ ಸರ್ವ ಧರ್ಮಗಳ ಸಂರಕ್ಷಣೆಯ ದೃಷ್ಟಿಯಿಂದ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಸಹಕಾರಿಗಳು ಈ ಯಾತ್ರೆಯಲ್ಲಿ ಭಾಗವಹಿಸಲಿ ದ್ದಾರೆ.'ಸಹಕಾರ ರ ರತ್ನ' ದರ್ಮ ಜಾಗೃತಿ ಯಾತ್ರೆ'ಗೆ ತಮ್ಮೆಲ್ಲರ ಸಹಕಾರವನ್ನು ಈ ಮೂಲಕ ಕೋರುವು ದಾಗಿ ಶಶಿಕುಮಾರ್ ರೈ ಬಾಲ್ಯೋಟ್ಟು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ಎಸ್. ಬಿ. ಜಯರಾಮ ರೈ, ಕೆ.ಜೈರಾಜ್ ಬಿ.ರೈ, ಎಸ್.ಎನ್. ಮನ್ಮಥ, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News