×
Ad

ಅ.15ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ಆರೋಗ್ಯ ತಪಾಸಣಾ ಶಿಬಿರ

Update: 2024-10-14 19:22 IST

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ.

ಅ.15ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಅ.16ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಮತ್ತು ಅ.19ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News