×
Ad

ಅ.15ರಂದು ಯೂತ್ ರೆಡ್‌ಕ್ರಾಸ್ ಪ್ರಶಸ್ತಿ ಪ್ರದಾನ ಸಮಾರಂಭ

Update: 2024-10-14 20:19 IST

ಮಂಗಳೂರು , ಅ.14: ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಇದರ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಸಹಯೋಗದಲ್ಲಿ ಅ.15ರಂದು ಬೆಳಗ್ಗೆ 9:30ರಿಂದ ಯೂತ್ ರೆಡ್‌ಕ್ರಾಸ್‌ನ ಯೋಜನಾ ಧಿಕಾರಿಗಳಿಗೆ ತರಬೇತಿ ಶಿಬಿರ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ವಿ.ವಿ.ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.

ಬೆಳಗ್ಗೆ 11ಕ್ಕೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಂಗಳೂರು ವಿ.ವಿ.ಯ ಕುಲಪತಿ ಪ್ರೊ.ಪಿ.ಎಲ್.ಧರ್ಮ ಉದ್ಘಾಟಿಸಲಿದ್ದಾರೆ.

ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಬಿ.ನಿತ್ಯಾನಂದ ಶೆಟ್ಟಿ, ಡಾ.ಗಣನಾಥ ಶೆಟ್ಟಿ ಎಕ್ಕಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿ.ವಿ.ಕಾಲೇಜಿನ ಪ್ರಾಚಾರ್ಯ ಪ್ರೊ.ಗಣಪತಿ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಂಗಳೂರು ವಿ.ವಿ.ಯ ರಿಜಿಸ್ಟ್ರಾರ್ ರಾಜು.ಕೆ. ಮೊಗ ವೀರ ಮತ್ತು ಯೂತ್ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News