ಎ.19: ದ.ಕ. ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

Update: 2024-04-18 16:02 GMT

ಮಂಗಳೂರು, ಎ.18: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎ.19ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 6:05ಕ್ಕೆ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 8ಕ್ಕೆ ನಗರದ ತಾಜ್ ವಿವಾಂತದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಶಾಸಕರು ಹಾಗೂ 2023ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಸಭೆ ನಡೆಸುವರು. 9:15ಕ್ಕೆ ತುಂಬೆ, 10:25ಕ್ಕೆ ಬೆಳ್ತಂಗಡಿಗೆ ಭೇಟಿ ನೀಡುವರು.

2:30ಕ್ಕೆ ಬಂಟ್ವಾಳದ ಕಾವಳಕಟ್ಟೆಯಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು. ಸಂಜೆ 4:15ಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಅಲ್ಪಸಂಖ್ಯಾತರ ಘಟಕದ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ 5:30ಕ್ಕೆ ಮಂಗಳೂರು ಬಿಷಪ್ ಹೌಸ್‌ಗೆ ಭೇಟಿ ನೀಡುವರು.

ಎ.20ರಂದು ನಿಯೋಜಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಧ್ಯಾಹ್ನ 12:45ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News