×
Ad

ನ.25 ರಂದು ಬೋಳಾರದ ಶಾದಿಮಹಲ್ ನಲ್ಲಿ ಸೀರತ್ ಕಾರ್ಯಕ್ರಮ

Update: 2023-11-24 14:49 IST

ಮಂಗಳೂರು: ಯುನಿವೆಫ್ ಕರ್ನಾಟಕದ ವತಿಯಿಂದ 2023 ರ ಅಕ್ಟೋಬರ್ 6 ರಿಂದ ಡಿಸೆಂಬರ್ 22 ವರೆಗೆ ಹಮ್ಮಿಕೊಳ್ಳಲಾದ "ಮಾನವ ಧರ್ಮ, ದೈವಿಕ ಕಾನೂನು ಮತ್ತು ಪ್ರವಾದಿ ಮುಹಮ್ಮದ್ (ಸ)" ಎಂಬ ಕೇಂದ್ರೀಯ ವಿಷಯದಲ್ಲಿ  "ಅರಿಯಿರಿ ಮನುಕುಲದ ಪ್ರವಾದಿಯನ್ನು" ಅಭಿಯಾನದ ಪ್ರಯುಕ್ತ ನವೆಂಬರ್ 25 ರ ಶನಿವಾರ ರಾತ್ರಿ 7.45 ಕ್ಕೆ ಬೋಳಾರದ ಶಾದಿಮಹಲ್ ನಲ್ಲಿ ಸೀರತ್ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ನಿಮ್ರಾ ಮಸೀದಿಯ ಖತೀಬ್ ಹಾಗೂ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿಯವರು "ಪ್ರವಾದಿ ಹಃ ಮುಹಮ್ಮದ್ (ಸ) ರ ಮಾದರಿ ಜೀವನ" ಎಂಬ ವಿಷಯದಲ್ಲಿ ಪ್ರಮುಖ ಭಾಷಣ ಮಾಡಲಿದ್ದಾರೆ.

ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಜನಾಬ್ ಪಕೀರಬ್ಬ  ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮಂಗಳೂರು ಶಾಖಾಧ್ಯಕ್ಷ ಉಬೈದುಲ್ಲಾ ಬಂಟ್ವಾಳ ವಿನಂತಿಸಿದ್ದಾರೆ.

ಸ್ತ್ರೀಯರಿಗೆ ಪ್ರತ್ಯೇಕ ಸ್ಥಳಾವಕಾಶ ಮಾಡಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News