×
Ad

ಜೂ.25: ಮಾದಕದ್ರವ್ಯ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ

Update: 2024-06-24 19:57 IST

ಮಂಗಳೂರು: ದ.ಕ.ಜಿಲ್ಲಾಡಳಿತ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್, ಮಂಗಳೂರು ಕಸ್ಟಮ್ಸ್ ಕಮಿಷನರೇಟ್, ಇಂಡಿಯನ್ ಕೋಸ್ಟ್‌ಗಾರ್ಡ್ ಹಾಗೂ ನಗರದ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಕೌನ್ಸ್‌ಲಿಂಗ್ ವಿಭಾಗದ ಸಹಯೋಗದಲ್ಲಿ ಜೂ.25ರಂದು ಮಂಗಳವಾರ ಮಧ್ಯಾಹ್ನ 1.40ಕ್ಕೆ ಮಾದಕ ದ್ರವ್ಯ ಮುಕ್ತ ಭಾರತ ಜಾಗೃತಿ ಕಾರ್ಯ ಕ್ರಮವು ಕಾಲೇಜಿನ ಲೊಯೋಲಾ ಸಭಾಂಗಣದಲ್ಲಿ ನಡೆಯಲಿದೆ.

ದ.ಕ.ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಎಜೆ ಇನ್ಸ್‌ಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ಮನಶಾಸ್ತ್ರ ವಿಭಾಗದ ಡಾ.ಬಿ.ಕೆ ಕಿರಣ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News