×
Ad

ಎ.26: ತುಳು ಚಾವಡಿ ತಮ್ಮನ

Update: 2025-04-24 22:17 IST

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ವತಿಯಿಂದ ಹಿರಿಯ ತುಳು ಸಾಹಿತಿ, ನಿವೃತ್ತ ಉಪನ್ಯಾಸಕ ಕೆ.ಟಿ. ಆಳ್ವ ಅವರಿಗೆ ಚಾವಡಿ ತಮ್ಮನದ ಗೌರವ ಕಾರ್ಯಕ್ರಮವು ಎ.26ರಂದು ಸಂಜೆ 4ಕ್ಕೆ ಪಜೀರು ಗ್ರಾಮದ ರಾಮ್‌ಬಾಗ್‌ನಲ್ಲಿ ನಡೆಯಲಿದೆ.

ಸುದೀರ್ಘ ಕಾಲ ಸರಕಾರಿ ಪ.ಪೂ. ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕುದ್ರೆಪ್ಪಾಡಿ ತಿಮ್ಮಣ್ಣ ಆಳ್ವ (ಕೆ.ಟಿ. ಆಳ್ವ) ಅವರು ’ತುಳುನಾಡ್ದ ತುಡರ್’ ಮತ್ತು ’ತುಳು ಭಾಷೆದ ತಿರ್ಲ್’ ಎಂಬ ಕೃತಿಯನ್ನು ಹೊರ ತಂದಿದ್ದಾರೆ. ತುಳು ಸಂಸ್ಕೃತಿ, ಭಾಷೆ, ಜನಪದ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಅನೇಕ ಲೇಖನಗಳನ್ನು ಪ್ರಕಟಿಸಿದ್ದಾರೆ.

ಮುಡಿಪು ಸರಕಾರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಬಳಗದ ಸಹಯೋಗದಲ್ಲಿ ನಡೆಯುವ ಈ ಚಾವಡಿ ತಮ್ಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸುವರು. ಪಜೀರ್ ಗ್ರಾಪಂ ಅಧ್ಯಕ್ಷ ರಫೀಕ್ ಪಜೀರ್ ಅತಿಥಿಯಾಗಿ ಭಾಗವಹಿಸುವರು. ಪತ್ರಕರ್ತ ಶಶಿಧರ ಪೊಯ್ಯತ್ತಬೈಲ್ ಅಭಿನಂದನಾ ಭಾಷಣ ಮಾಡುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News