×
Ad

ಉಡುಪಿ | ಎಬಿವಿಪಿಯಿಂದ ಅಭ್ಯಾಸ ವರ್ಗ: ಪದಾಧಿಕಾರಿಗಳ ಆಯ್ಕೆ

Update: 2025-10-11 18:05 IST

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಅಭ್ಯಾಸ ವರ್ಗವು ಕಡಿಯಾಳಿ ಕಾತ್ಯಾಯಿನಿ ಮಂಟಪದಲ್ಲಿ ಶುಕ್ರವಾರ ನಡೆಯಿತು.

ಕಾರ್ಯಕ್ರಮವನ್ನು ಪ್ರೊ.ಪ್ರವೀಣ್ ಆಚಾರ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಿಭಾಗ ಸಂಚಾಲಕ ಸುವಿತ್ ಶೆಟ್ಟಿ, ಪ್ರಾಂತ ವಿದ್ಯಾರ್ಥಿನಿ ಸಹ ಪ್ರಮುಖ್ ಸಂಹಿತಾ ಕೆ. ಮತ್ತು ಉಡುಪಿ ಜಿಲ್ಲಾ ಸಂಚಾಲಕ ಶ್ರೇಯಸ್ ಅಂಚನ್ ಉಪಸ್ಥಿತರಿದ್ದರು.

ಮೊದಲ ಅವಧಿ ಸೈದ್ಧಾಂತಿಕ ಭೂಮಿಕೆ ಆಗಿದ್ದು, ಈ ಅವಧಿಯನ್ನು ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಸಮಿತಿ ಸದಸ್ಯರಾದ ಶ್ರೀವತ್ಸ ಡಿ ಗಾಂವ್ಸಕರ್ ನಡೆಸಿಕೊಟ್ಟರು. ಎರಡನೆಯ ಅವಧಿಯು ಕ್ಯಾಂಪಸ್ ಕಾರ್ಯವಾಗಿದ್ದು, ಈ ಅವಧಿಯನ್ನು ಹಿರಿಯ ಕಾರ್ಯಕರ್ತ ಶೀತಲ್ ಕುಮಾರ್ ಕಾರ್ಕಳ ನೇರವೇರಿಸಿದರು. ಕಾರ್ಯಕ್ರಮದ ಕೊನೆಯ ಅವಧಿಯು ಪ್ರಶಿಕ್ಷಣವಾಗಿದ್ದು, ವಿಭಾಗ ಎಸ್ಎಫ್ಎಸ್ ಸಂಯೋಜಕ ಅನಂತಕೃಷ್ಣ ನಡೆಸಿದರು.

2025-26ನೇ ಸಾಲಿನ ನೂತನ ಕಾರ್ಯಕಾರಿಣಿ ಜವಾಬ್ದಾರಿಯನ್ನು ಜಿಲ್ಲಾ ಪ್ರಮುಖ ರಾಜಶಂಕರ್ ನಡೆಸಿಕೊಟ್ಟರು. ನಗರ ಅಧ್ಯಕ್ಷರಾಗಿ ಡಾ.ಸದಾನಂದ ಭಟ್, ನಗರ ಉಪಾಧ್ಯಕ್ಷರಾಗಿ ಪ್ರವೀಣ್ ಆಚಾರ್ಯ ಮತ್ತು ನಗರ ಕಾರ್ಯದರ್ಶಿಯಾಗಿ ಮನೀಶ್ ಕುಂದರ್ ಸೇರಿದಂತೆ ನಗರದ ಕಾರ್ಯಕಾರಿಣಿಯ ಅನೇಕ ಜವಾಬ್ದಾರಿಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಮರಾಠಿ ಮತ್ತು ತಾಲೂಕು ಸಂಚಾಲಕ ಮಾಣಿಕ್ಯ ಭಟ್ ಉಪಸ್ಥಿತರಿದ್ದರು. ಅನುಷಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News