×
Ad

ಮನೆಗೆ ನುಗ್ಗಿ ಹಲ್ಲೆ ಆರೋಪ: ಪ್ರಕರಣ ದಾಖಲು

Update: 2023-08-25 22:02 IST

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಮೈಮುನಾ ಎಂಬವರ ಮನೆಗೆ ಐದಾರು ಮಂದಿಯ ತಂಡವೊಂದು ನುಗ್ಗಿ ಅನುಚಿತವಾಗಿ ವರ್ತಿಸಿದ್ದಲ್ಲದೆ, ತಡೆಯಲು ಬಂದ ಆಕೆಯ ಅಸ್ವಸ್ಥ ಮಗನ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.

ಆರೋಪಿ ಮಹಮ್ಮದ್ ಕುಟೇಲು ಎಂಬಾತ ತನ್ನ ಐದಾರು ಮಂದಿಯ ತಂಡದೊಂದಿಗೆ ಗುರುವಾರ ಸಂಜೆ ಮನೆಗೆ ಅಕ್ರಮ ಪ್ರವೇಶ ಮಾಡಿ ಮೈಮುನಾರೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ತಡೆಯಲು ಬಂದ ಆಕೆಯ ಅಸ್ವಸ್ಥ ಮಗನ ಮೇಲೂ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದು, ಹಲ್ಲೆಯಿಂದ ಅಸ್ವಸ್ಥಗೊಂಡ ಆಕೆಯ ಮಗನನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News