ಯುವಕನಿಗೆ ಹಲ್ಲೆ: ಮೂವರ ವಿರುದ್ಧ ಪ್ರಕರಣ ದಾಖಲು
ಸುಳ್ಯ: ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ವಾಸವಾಗಿರುವ ಯುವಕನ ಮೇಲೆ ರಾತ್ರಿ ವೇಳೆಯಲ್ಲಿ ಬಂದ ಯುವಕರ ತಂಡವೊಂದು ತಲ್ವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.
ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ ಅವರ ಮಗ ಪುನೀತ್ ಹಲ್ಲೆಗೊಳಗಾದ ಯುವಕ. ಬುಧವಾರ ರಾತ್ರಿ ಗಂಟೆ 9.30 ರ ವೇಳೆಗೆ ಆರಂಬೂರಿನಲ್ಲಿರುವ ಮನೆಗೆ ಬಂದ ನಾಲ್ವರು ಯುವಕರು ಬೈಕಿನಲ್ಲಿ ಬಂದು ಏಕಾಏಕಿ ತಲ್ವಾರ್ ಮತ್ತು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪುನಿತ್ ಅವರ ತಲೆಯ ಭಾಗಕ್ಕೆ ಏಟಾಗಿದ್ದು ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಯಿತು.
ಈ ಬಗ್ಗೆ ಸುಳ್ಯ ಪೊಲೀಸರಿಗೆ ದೂರು ನೀಡಲಾಗಿದ್ದು ಪ್ರಕರಣವನ್ನು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ಮಾಡಿದ ಆರೋಪಿಗಳ ಪೈಕಿ ಮನೋಜ್, ಚೈತ್ರೇಶ್ ಮತ್ತು ಶ್ರೀಜಿತ್ ಉಪ್ಪಳ ಎಂಬವರ ಮೇಲೆ ಕೇಸು ದಾಖಲಿಸಿಕೊಂಡಿದ್ದಾರೆ. ಓರ್ವ ಆರೋಪಿಯ ಬೈಕನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.