×
Ad

ವಿಟ್ಲ: ಆಟೋ ಚಾಲಕನಿಗೆ ಚೂರಿ ಇರಿತ; ಆರೋಪಿ ಸೆರೆ

Update: 2024-08-18 19:25 IST

ವಿಟ್ಲ: ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಓರ್ವ ಇನ್ನೊಬ್ಬನಿಗೆ ಚೂರಿಯಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉರಿಮಜಲು ಜಂಕ್ಷನ್‍ನಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

ಉರಿಮಜಲು ನಿವಾಸಿ ಆಟೋ ಚಾಲಕ ಶರೀಫ್ (38) ಇರಿತದಿಂದ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಆರೋಪಿಯಾಗಿದ್ದು, ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಶರೀಪ್ ಉರಿಮಜಲು ಜಂಕ್ಷನ್‍ಲ್ಲಿ ಬೇರೆಯವರ ಜತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಹಾಫೀಲ್ ಶರೀಪ್ ಜತೆ ಮಾತಿಗೆ ಇಳಿದಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಆರೋಪಿ ಶರೀಫ್‌ ಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News