×
Ad

ಶೀಘ್ರದಲ್ಲೇ ಆಯುಶ್ ಸ್ಪೋರ್ಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ಆರಂಭ: ಡಾ.ಆನಂದ್

Update: 2023-11-02 19:39 IST

ಮಂಗಳೂರು: ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯ ವತಿಯಿಂದ ದೇಶದಲ್ಲಿಯೇ ಪ್ರಥಮವಾಗಿ ಆಯುಷ್ ಸ್ಫೋಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ಆರಂಭವಾಗಲಿದೆ ಎಂದು ದ.ಕ.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ತಿಳಿಸಿದ್ದಾರೆ.

ನಗರದ ಆಯುಷ್ ಆಸ್ಪತ್ರೆಯಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘ ಮತ್ತು ವೆನ್ಲಾಕ್ ಆಯುಷ್ ಆಸ್ಪತ್ರೆಯ ವತಿಯಿಂದ ಗುರುವಾರ ಆರಂಭವಾದ ಉಚಿತ ಆಯುಷ್ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು

ಮಂಗಳೂರು ವೆನ್ಲಾಕ್ ಆಯುಷ್ ಆಸ್ಪತ್ರೆ ಯಲ್ಲಿ ಏಕಕಾಲದಲ್ಲಿ ೯೬ ಆಯುಷ್ ಥೆರಪಿಗಳನ್ನು ನೀಡುವ ಸೌಲಭ್ಯಗಳನ್ನು ಒಳಗೊಂಡಿದೆ. ನರಚಿಕಿತ್ಸೆಗೆ ಸಂಬಂಧಿಸಿದಂತೆ ಇರುವ ನಿಮ್ಹಾನ್ಸ್ ಆಸ್ಪತ್ರೆಯ ಮಾದರಿಯಲ್ಲಿ ಎಲುಬು ಮತ್ತು ಅಸ್ತಮ ಚಿಕಿತ್ಸೆ ಗೆ ದೇಶದಲ್ಲಿ ಉತ್ಕೃಷ್ಟ ಚಿಕಿತ್ಸೆ ನೀಡುವ ಏಕೈಕ ಆಸ್ಪತ್ರೆಯಾಗಿ ವೆನ್ಲಾಕ್‌ನ ಅಯುಷ್ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸುವ ಗುರಿ ಇದೆ ಎಂದು

ವೆನ್ಲಾಕ್ ಆಯುಷ್ ಆಸ್ಪತ್ರೆಯ ಆಯುಷ್ ಜಿಲ್ಲಾ ವೈದ್ಯಾಧಿಕಾರಿ ಡಾ. ಇಕ್ಬಾಲ್ ತಿಳಿಸಿದರು.

ಕ್ರೀಡಾ ಪಟುಗಳಿಗೆ ಚಿಕಿತ್ಸೆ ನೀಡುವ ಆಯುಷ್ ಚಿಕಿತ್ಸಾ ವಿಭಾಗವನ್ನು ವೆನ್ಲಾಕ್ ಆಸ್ಪತ್ರೆಯ ವತಿಯಿಂದ ಆರಂಭಿಸ ಲಾಗುವುದು ಪೂರ್ಣ ಪ್ರಮಾಣದ ಸಿಬ್ಬಂದಿ ಗಳ ನೇಮಕಾತಿ ಆದ ಬಳಿಕ ಇನ್ನಷ್ಟು ಸೇವೆ ನೀಡಲು ಸಾಧ್ಯ ಎಂದು ಅವರು ಹೇಳಿದರು

ಆಯುಷ್ ಆಸ್ಪತ್ರೆಯ ವೈದ್ಯರಾದ ಡಾ. ಸೈಯ್ಯದ್ ಹುಸೈನ್, ಡಾ.ಬಸವರಾಜ್, ಡಾ.ಯಶ್ವಿತ್, ಡಾ.ಪ್ರಕಾಶ್ ,ಡಾ.ಅಜಿತ್ ನಾಥ್ ಇಂದ್ರ, ಹಿರಿಯ ಪತ್ರಕರ್ತಕೆ. ಆನಂದ ಶೆಟ್ಟಿ , ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಮಹಮ್ಮದ್ ಆರಿಫ್ ಪಡುಬಿದ್ರಿ ಮತ್ತು ರಾಜೇಶ್ ದಡ್ಡಂಗಡಿ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಮಾಜಿ ಅಧ್ಯಕ್ಷ ಅನ್ನು ಮಂಗಳೂರು , ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್. ರಾಮಕೃಷ್ಣ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News