×
Ad

ಬಜ್ಪೆ: ಲಾರಿ ಢಿಕ್ಕಿ; ಬೈಕ್‌ ಸವಾರ ಮೃತ್ಯು

Update: 2023-10-07 22:29 IST

ಬಜ್ಪೆ, ಅ.7: ಟಿಪ್ಪರ್‌ ಲಾರಿ ಮತ್ತು ಬೈಕಿನ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಬಜ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ಮುಚ್ಚೂರು ಕ್ರಾಸ್ ಬಳಿ ಶುಕ್ರವಾರ ರಾತ್ರಿ ವರದಿಯಾಗಿದೆ.

ಮೃತರನ್ನು ಸಚಿನ್‌ ಕುಮಾರ್‌ ಎಂದು ತಿಳಿದು ಬಂದಿದೆ.

ಮೃತ ಸಚಿನ್‌ ಅವರು ಕದ್ರಿಯಲ್ಲಿ ಬ್ಯಾಂಕ್‌ ಉದ್ಯೋಗಿಯಾಗಿದ್ದು, ಕೆಲಸ ಮುಗಿಸಿಕೊಂಡು ಸಂಜೆ 6.45ರ ವೇಳೆಗೆ ತನ್ನ ಮನೆಗೆ ತೆರಳುತ್ತಿದ್ದ ಸಂದರ್ಭ ಮೂಡಬಿದ್ರೆ ಕಡೆಯಿಂದ ಕೈಕಂಬ ಕಡೆಗೆ ಅತೀವೇಗ ಮತ್ತು ಅಜಾಗರೂಕತೆಯಿಂದ ಬಂದ ಟಿಪ್ಪರ್‌ ಲಾರಿಯು ಸಚಿನ್‌ ತೆರಳುತ್ತಿದ್ದ ಬೈಕ್‌ ನ ಬಿಂಭಾಗಕ್ಕೆ ಡಿಕ್ಕಿಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನು ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸಾರ್ವಜನಿಕರು ಅವರುನ್ನು ಮೂಡಬಿದ್ರೆಯ ಆಸ್ಪತ್ರೆಗೆ ರವಾನಿಸಿದ್ದರು. ಅಲ್ಲಿ ಸಚಿನ್‌ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧಿಸಿ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News