×
Ad

ಬಂಟ್ವಾಳ : ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ; ಪ್ರಕರಣ ದಾಖಲು

Update: 2025-08-31 22:10 IST

ಬಂಟ್ವಾಳ : ಸುಳ್ಳು ದೂರು ನೀಡಿರುವ ಆರೋಪಿಯ ಪರವಾಗಿ ಸಾಮಾಜಿಕ ಜಾಲ ತಾಣವಾದ ಫೇಸ್ ಬುಕ್ ಪೇಜಿನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ವ್ಯಕ್ತಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 13 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 68/2025 ರ ಪ್ರಕರಣದಲ್ಲಿ ದೂರುದಾರ ಉಮ್ಮರ್ ಫಾರೂಕ್ ಎಂಬವರು ದೇರಾಜೆ ಬಳಿ ಇಬ್ಬರು ಅಪರಿಚಿತರು ಕೊಲೆ ಮಾಡಲು ಯತ್ನಿಸಿರುವ ಬಗ್ಗೆ ನೀಡಿದ ದೂರನ್ನು ಪೊಲೀಸರು ತನಿಖೆ ನಡೆಸಿದ್ದು, ಇದೊಂದು ಸುಳ್ಳು ದೂರಾಗಿರುವುದರಿಂದ ಉಮ್ಮರ್ ಫಾರೂಕ್ ವಿರುದ್ಧ ಆ.26 ರಂದು ಠಾಣಾ ಅಪರಾಧ ಕ್ರಮಾಂಕ 128/2025 ಕಲಂ 192, 353(1)(ಬಿ), 230(1), 248(ಎ) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.

ಈ ವಿಚಾರವಾಗಿ ಆ.28 ರಂದು ಫೇಸ್ ಬುಕ್‌ನಲ್ಲಿ ಅಶ್ರಫ್ ತಲಪಾಡಿ ಎಂಬ ಪೇಜಿನಲ್ಲಿ ಸುಳ್ಳು ಆಪಾದನೆ ಮಾಡಿದ ಬಂಟ್ವಾಳ ತಾಲೂಕಿನ ಅಶ್ರಪ್ ಎಂಬುವರಿಗೆ ನೋಟಿಸ್ ಜಾರಿ ಮಾಡಿ ಆತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 130/2025 ಕಲಂ 353(1)(ಬಿ)(2), 192 ಬಿ ಎನ್ ಎಸ್ ಕಾಯಿದೆಯಂತೆ ಪ್ರಕಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News