ಬಂಟ್ವಾಳ | ಹತ್ಯೆಯಾದ ಅಬ್ದುಲ್ ರಹ್ಮಾನ್ ಮನೆಗೆ ಸಿಪಿಎಂ ನಿಯೋಗ ಭೇಟಿ
Update: 2025-05-30 15:17 IST
ಮಂಗಳೂರು: ದುಷ್ಕರ್ಮಿಗಳಿಂದ ಇತ್ತೀಚೆಗೆ ಹತ್ಯೆಯಾದ ಅಬ್ದುಲ್ ರಹ್ಮಾನ್ ಕೊಳತ್ತಮಜಲು ಅವರ ನಿವಾಸಕ್ಕೆ ಸಿಪಿಎಂ ಜಿಲ್ಲಾ ಸಮಿತಿ ನಿಯೋಗ ಶುಕ್ರವಾರ ಭೇಟಿ ನೀಡಿತು.
ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಯೋಗವು ನ್ಯಾಯಕ್ಕಾಗಿ ನಡೆಸುವ ಹೋರಾಟದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿತು.
ನಿಯೋಗದಲ್ಲಿ ಸಿಪಿಎಂ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಯಾದವ ಶೆಟ್ಟಿ, ಸುನೀಲ್ ಕುಮಾರ್ ಬಜಾಲ್, ಬಿ.ಎಂ.ಭಟ್, ವಸಂತ ಆಚಾರಿ, ಸದಾಶಿವ ಕುಪ್ಪೆಪದವು, ಯೋಗೀಶ್ ಜೆಪ್ಪಿನಮೊಗರು, ಈಶ್ವರಿ ಬೆಳ್ತಂಗಡಿ, ಸಂತೋಷ್ ಬಜಾಲ್, ರಫೀಕ್ ಹರೇಕಳ, ರಝಾಕ್ ಮೊಂಟೆಪದವು, ರಝಾಕ್ ಮುಡಿಪು, ರಿಝ್ವಾನ್ ಹರೇಕಳ, ಬಾವಾ ಪದರಂಗಿ ಉಪಸ್ಥಿತರಿದ್ದರು.