×
Ad

ಬಂಟ್ವಾಳ: ಬಸ್ - ಟ್ಯಾಂಕರ್ ಢಿಕ್ಕಿ; ನಾಲ್ವರಿಗೆ ಗಾಯ

Update: 2024-02-10 19:38 IST

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ಯಾಂಕರ್ ಲಾರಿ ಮುಖಾಮುಖಿಯಾಗಿ ಢಿಕ್ಕಿಯಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ಬಂಟ್ವಾಳ – ವಿಲ್ಲಾಂಪುರ ರಾಷ್ಟ್ರೀಯ ಹೆದ್ದಾರಿಯ ಪರ್ಲ ಎಂಬಲ್ಲಿ ಶನಿವಾರ ನಡೆದಿದೆ.

ಘಟನೆಯಿಂದ ಬಸ್ಸಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಪರ್ಲ ನಿವಾಸಿ ಭುಜಂಗ ಮೂಲ್ಯ ಎಂಬವರ ಮನೆಗೆ ಹಾನಿಯಾಗಿದೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣೆ  ಎ‌.ಎಸ್.ಐ. ವಿಜಯ್, ಸಿಬ್ಬಂದಿಗಳಾದ ರಮೇಶ್, ರಾಜು ಪೂಜಾರಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News