×
Ad

ಬೆಳ್ತಂಗಡಿ: ಮಗನ ಸಾವಿನಿಂದ ನೊಂದ ತಂದೆ ಆತ್ಮಹತ್ಯೆ

Update: 2024-01-16 15:01 IST

ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ 13 ನೇ ದಿನ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ಮಂಗಳವಾರ ನಡೆದಿದೆ.

ಮೃತನನ್ನು ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ (41) ಎಂದು ಗುರುತಿಸಲಾಗಿದೆ. ಇದೇ ತಿಂಗಳು ಜ.4 ರಂದು ಕ್ಷುಲಕ ವಿಚಾರಕ್ಕೆ ಯೋಗೀಶ್ ಅವರ ಮಗ‌ ಯಕ್ಷಿತ್ (14) ಮನೆಯೊಳಗೆ ತಾಯಿಯ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.

ಮಗನ ಉತ್ತರಕ್ರಿಯೆ ನಡೆದ ಬೆನ್ನಲ್ಲೇ ತಂದೆಯೂ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಆತ್ಮಹತ್ಯೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News