ದ.ಕ.ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ : ಸಿಎಂಗೆ ಉಸ್ತುವಾರಿ ಸಚಿವರ ಮನವಿ
ಸಾಂದರ್ಭಿಕ ಚಿತ್ರ : PC | GROK
ಮಂಗಳೂರು,ಡಿ.1: ದ.ಕ.ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ ಸ್ಥಾಪಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಇತ್ತೀಚೆಗೆ ಅಸಾಂಕ್ರಾಮಿಕ ರೋಗಗಳಾದ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಗಳ ಸಂಖ್ಯೆ ಹೆಚ್ಚುತ್ತಿದೆ. ತಾನು ಜಿಲ್ಲೆಗೆ ಭೇಟಿ ನೀಡುತ್ತಿರುವ ಸಂದರ್ಭಗಳಲ್ಲಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಗಳ ಅಗತ್ಯ ಚಿಕಿತ್ಸೆಗೆ ಪ್ರತ್ಯೇಕವಾಗಿ ಸರಕಾರಿ ಆಸ್ಪತ್ರೆಗಳನ್ನು ಪ್ರಾರಂಭಿಸಲು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಕೋರಿದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಹೊರವಲಯದ ಮೂಡುಶೆಡ್ಡೆಯ ಕ್ಷಯರೋಗಗಳ ಆಸ್ಪತ್ರೆಯ ಆವರಣದಲ್ಲಿ ಲಭ್ಯರುವ ಜಾಗದಲ್ಲಿ ಶ್ರೀಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗಳ ಒಂದೊಂದು ಘಟಕಗಳನ್ನು ಸ್ಥಾಪಿಸಲು ಕ್ರಮ ವಹಿಸಬೇಕು ಎಂದು ಮನವಿಯಲ್ಲಿ ವಿವರಿಸಿದ್ದಾರೆ.