ಎನ್‌ಎಸ್‌ಯುಐ ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಎಡ್ವರ್ಡ್ ಆಯ್ಕೆ

Update: 2024-03-29 09:43 GMT

ಪುತ್ತೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಎನ್‌ಎಸ್‌ಯುಐ ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಎಡ್ವರ್ಡ್ ಪುತ್ತೂರು ಅವರು  ಆಯ್ಕೆಯಾಗಿದ್ದಾರೆ.

ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಎಡ್ವರ್ಡ್‌ ಅವರನ್ನು ಎನ್‌ಎಸ್‌ಯುಐ ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಎಡ್ವರ್ಡ್‌ ಅವರು  NSUI ವಿದ್ಯಾರ್ಥಿ ಸಂಘಟನೆಯಲ್ಲಿ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಅಮ್ಮಿನಡ್ಕ ನಿವಾಸಿ ಮಿಂಗಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿಯ ಪುತ್ರ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News