×
Ad

ಗುಡ್ಡೆ ಅಂಗಡಿ | ನೂರುದ್ದೀನ್ ಜುಮಾ ಮಸೀದಿ ವತಿಯಿಂದ ಬೃಹತ್ ಮೀಲಾದ್ ರ‍್ಯಾಲಿ

Update: 2025-09-06 14:44 IST

ಬಂಟ್ವಾಳ : ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿಯಲ್ಲಿ ಲೋಕಾನುಗ್ರಹಿ ಮುಹಮ್ಮದ್ ಮುಸ್ತಫಾ (ಸ. ಅ) ರವರ ಜನ್ಮ ದಿನಾಚರಣೆಯ ಪ್ರಯುಕ್ತ ಬೃಹತ್ ಮೀಲಾದ್ ರ‍್ಯಾಲಿ ನಡೆಯಿತು.

ರ‍್ಯಾಲಿಯನ್ನು ಸ್ಥಳೀಯ ಖತೀಬ್ ಅಸೀಫ್ ದಾರಿಮಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದಿಕ್, ನೂರುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಸಜೀಪ, ಕಾರ್ಯದರ್ಶಿ ಅಬೂಬಕ್ಕರ್ ಮೆಲ್ಕಾರ್, ಮುಹಮ್ಮದ್ ಹನೀಫ್, ಮುಹಮ್ಮದ್ ಸಿದ್ದಿಕ್, ಅಬ್ದುಲ್ ಮಜೀದ್ ಬೋಗೋಡಿ, ಇಸ್ಮಾಯಿಲ್ ಮುಸ್ಲಿಯಾರ್, ನಾಸಿರ್ ಅಸ್ಲಮಿ, ಅಬ್ದುರಹ್ಮಾನ್ ಮುಸ್ಲಿಯಾರ್, ಅನ್ಸಾರ್ ಬೋಗೋಡಿ, ಝಕಾರಿಯ ಬೋಗೋಡಿ, ಫಾರೂಕ್ ಎಬಿಸಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News