×
Ad

ಹೊಸಂಗಡಿ : ಯುವಕನ ಮೃತದೇಹ ನದಿಯಲ್ಲಿ ಪತ್ತೆ

Update: 2025-12-25 00:11 IST

ಮೂಡುಬಿದಿರೆ : ಹೊಸಂಗಡಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಸಂಜೆ ಪತ್ತೆಯಾಗಿದೆ.

ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ್ ಪೂಜಾರಿ ( 42) ಎಂಬಾತ ಆತ್ಮಹತ್ಯೆ ಮಾಡಿಕೊಂಡವರು.

ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ.

ವಿದೇಶದಲ್ಲಿದ್ದ ಈತ ಇತ್ತೀಚೆಗಷ್ಟೇ ಊರಿಗೆ ಬಂದಿದ್ದು,ಅಲ್ಲಿಂದ ಹೊಸಂಗಡಿಯಲ್ಲಿರುವ ಹೆಂಡತಿ ಮನೆಗೆ ಬಂದಿದ್ದರೆನ್ನಲಾಗಿದೆ. ರವಿವಾರ ಅದ್ಯಾವುದೋ ವಿಷಯಕ್ಕೆ ಜಗಳ ನಡೆದಿತ್ತೆನ್ನಲಾಗಿದ್ದು ಮಿಯ್ಯಾರಿನಲ್ಲಿರುವ ತನ್ನ ಅಣ್ಣನ ಮೊಬೈಲ್ ಗೆ ಮೆಸೇಜ್ ಮಾಡಿ ಈ ಬಗ್ಗೆ ಹೇಳಿಕೊಂಡಿದ್ದು, ಅವರು ‘ಸರಿಮಾಡುವ, ಆತುರದ ನಿರ್ಧಾರ ಬೇಡ’ ಎಂದು ಬುದ್ಧಿಮಾತು ಹೇಳಿದ್ದರೆನ್ನಲಾಗಿದೆ. ಆದರೆ ಆತ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೇರವಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

ವೇಣೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News