×
Ad

ಪದ್ಮಲತಾ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆದರೆ ಸತ್ಯ ಹೊರಬರುವ ವಿಶ್ವಾಸವಿದೆ: ಇಂದ್ರಾವತಿ

Update: 2025-08-11 11:59 IST

ಬೆಳ್ತಂಗಡಿ: ಪದ್ಮಲತಾ ಹತ್ಯೆಯಾಗಿ 39 ವರ್ಷಗಳು ಕಳೆದಿವೆ. ಈಗಲೂ ಸೂಕ್ತ ತನಿಖೆ ನಡೆದರೆ ಸತ್ಯ ಹೊರಬಂದು ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸವಿದೆ ಎಂದು ಕೊಲೆಯಾದ ಪದ್ಮಲತಾ ಅವರ ಅಕ್ಕ ಇಂದ್ರಾವತಿ ಹೇಳಿದ್ದಾರೆ.

ಪದ್ಮಲತಾ ಸಾವಿನ ಪ್ರಕರಣದ ಬಗ್ಗೆ ಮರುತನಿಖೆ ನಡೆಸುವಂತೆ ಆಗ್ರಹಿಸಿ ಎಸ್ಐಟಿಗೆ ದೂರು ನೀಡಲು ಆಗಮಿಸಿದ ವೇಳೆ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಪದ್ಮಲತಾ ಪ್ರಕರಣದಲ್ಲಿ ಈ ಹಿಂದೆ ಹಲವು ಹಂತದ ತನಿಖೆಗಳು ನಡೆದಿದ್ದರೂ ನಮಗೆ ನ್ಯಾಯ ಸಿಕ್ಕಿಲ್ಲ. ಸಿಒಡಿ ತನಿಖೆ ನಡೆಸಿ 'ಪತ್ತೆಯಾಗದ ಪ್ರಕರಣ' ಎಂದು ವರದಿ ನೀಡಿದ್ದಾರೆ.

ಇದೀಗ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ಎಸ್ಐಟಿ ರಚಿಸಿದೆ. ಈ ಎಸ್ಐಟಿ ತನಿಖೆ ನಡೆಸಿದರೆ ಪದ್ಮಲತಾ ಸಾವಿನ ಪ್ರಕರಣದ ಆರೋಪಿಗಳನ್ನು ಕಾನೂನಿನ ಮುಂದೆ ತರಬಹುದು ಎಂಬ ವಿಶ್ವಾಸವಿದೆ. ಎಸ್ಐಟಿ ಪ್ರಕರಣದ ತನಿಖೆ ಕೈಗೆತ್ತಿಕೊಂಡರೆ ನಮ್ಮ ಬಳಿ ಇರುವ ಸಾಕ್ಷ್ಯಗಳು ಹಾಗೂ ಮಾಹಿತಿಗಳನ್ನು ತನಿಖಾ ತಂಡಕ್ಕೆ ನೀಡಲು ಸಿದ್ದರಿದ್ದೇವೆ ಎಂದವರು ಹೇಳಿದರು.

ಪದ್ಮಲತಾಳ ಹತ್ಯೆಯಾಗಿ 39 ವರ್ಷಗಳು ಕಳೆದಿವೆ. ಈ ಬಗ್ಗೆ ತನಿಖೆ ಮಾಡಿದರೆ ಈಗಲೂ ಸತ್ಯ ಹೊರಬರುವ ನಿರೀಕ್ಷೆಯಿದೆ ಎಂದು ಇಂದ್ರಾವತಿ ವಿಶ್ವಾಸ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News