×
Ad

ಜು.25-26: ರಾಜ್ಯಪಾಲರ ದ.ಕ.ಜಿಲ್ಲಾ ಪ್ರವಾಸ

Update: 2025-07-23 20:06 IST

ಮಂಗಳೂರು, ಜು.23: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಜು.25 ಮತ್ತು 26ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜು.25ರಂದು ಮಧ್ಯಾಹ್ನ 12:45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಉಡುಪಿಗೆ ತೆರಳುವರು. ಜು.26ರಂದು ಮಧ್ಯಾಹ್ನ 12ಕ್ಕೆ ಮಂಗಳೂರಿನ ಹಳೆಯ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ (ಐಆರ್‌ಸಿಎಸ್) ಶತಮಾನೋತ್ಸವ ಕಟ್ಟಡ ಉದ್ಘಾಟಿ ಸುವರು. ಅಪರಾಹ್ನ 3:30ಕ್ಕೆ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ದಿ ಪ್ರೇರಣಾ ದಿವಸ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5:50ಕ್ಕೆ ರಾಜ್ಯಪಾಲರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News