×
Ad

ಜು.27: ದ.ಕ. ಜಿಲ್ಲಾ ಪತ್ರಕರ್ತರ ಸಂಘದಿಂದ ಮಾನ್ಸೂನ್ ಸಂಭ್ರಮ

Update: 2025-07-25 21:18 IST

ಮಂಗಳೂರು, ಜು.25: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಅಂಗ ವಾಗಿ ದ.ಕ. ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘ, ಪ್ರೆಸ್‌ಕ್ಲಬ್ ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಹಾಗೂ ಶ್ರೀ ವಿಘ್ನೇಶ್ವರ ಗ್ರಾಮೀಣಾಭಿವೃದ್ಧಿ ಸೇವಾ ಸಮಿತಿ ಪಡು ಇದರ ಸಹಭಾಗಿತ್ವದಲ್ಲಿ ಪತ್ರಕರ್ತರ ತಾಲೂಕು ಸಂಘಗಳ ಒಕ್ಕೂಟದ ಸಹಕಾರದೊಂದಿಗೆ ಜು.27ರಂದು ನೀರುಮಾರ್ಗ ಪಡು ಬದಿನಡಿ ಸಮೀಪದ ಕೆಸರುಗದ್ದೆಯಲ್ಲಿ ಮಾನ್ಸೂನ್ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

ವಿಡಿಯೋ ಜರ್ನಲಿಸ್ಟ್ ದಿ. ನಾಗೇಶ್ ಪಡು ವೇದಿಕೆಯಲ್ಲಿ ಬೆಳಗ್ಗೆ 9:45ಕ್ಕೆ ಕಾರ್ಯಕ್ರಮ ಆರಂಭವಾ ಗಲಿದ್ದು, ಶಾಸಕ ಭರತ್ ಶೆಟ್ಟಿ ಉದ್ಘಾಟಿಸಲಿದ್ದಾರೆ.

*ನಾನಾ ಸ್ಪರ್ಧೆಗಳು: ಮಾನ್ಸೂನ್ ಸಂಭ್ರಮದಲ್ಲಿ 100 ಮೀ.ಓಟ, ತೆಂಗಿನಕಾಯಿ ಬಿಸಾಡುವುದು, ಓಟ-ಸುತ್ತಾಟ, ಚೆಂಡಾಟ, ಮಡಕೆ ಒಡೆಯುವುದು, ಹಾಳೆ ಓಟ, ತಪ್ಪಂಗಾಯಿ, ನಿಧಿ ಹುಡುಕಾಟ, ಹಗ್ಗ-ಜಗ್ಗಾಟ, ಪಾಸಿಂಗ್ ಬಾಲ್, ಪಿಲಿನಲಿಕೆ ಸೇರಿದಂತೆ ನಾನಾ ಸ್ಪರ್ಧೆಗಳು ನಡೆಯಲಿದೆ.

*ತುಳುನಾಡಿನ ತಿಂಡಿ-ತಿನಸುಗಳು: ಬೆಳಗ್ಗಿನಿಂದ ಊಟೋಪಚಾರದಲ್ಲಿ ಪತ್ರೊಡೆ, ಪೆಲಕಾಯಿ ಗಟ್ಟಿ, ಪದೆಂಗಿ ನೀರು, ಹಲಸಿನ ರಚ್ಚೆ ಚಟ್ನಿ, ಹುರುಳಿ ಚಟ್ನಿ, ತೊಜಂಕ್-ಹಲಸಿನ ಬೀಜ ಪಲ್ಯ, ಚಿಕನ್ ಸುಕ್ಕ, ಒಣಮೀನು ಗಸಿ, ರಾಗಿ ಕಷಾಯ ಸೇರಿದಂತೆ ತುಳುನಾಡಿನ ತಿಂಡಿ-ತಿನಸುಗಳು, ಖಾದ್ಯಗಳು, ಪಾನಿಯದ ವ್ಯವಸ್ಥೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News