ಕಡಬ: ತೋಡಿಗೆ ಬಿದ್ದು ಯುವಕ ಮೃತ್ಯು
Update: 2024-09-05 21:36 IST
ಕಡಬ: ಕಾಲು ಜಾರಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಎಂದು ಗುರುತಿಸಲಾಗಿದೆ. ಉಮೇಶ ಗುರುವಾರ ಸಂಜೆ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ತೋಡಿಗೆ ಬಿದ್ದಿದ್ದರು. ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಸುಮಾರು ಒಂದು ಕಿಮೀ ಕೆಳಗಡೆ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಕಡಬ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.