×
Ad

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮದ್ಯದಂಗಡಿ ಮುಚ್ಚಲು ಆದೇಶ

Update: 2025-12-09 19:23 IST

ಮಂಗಳೂರು,ಡಿ.9 : ಕೇರಳದ ಸ್ಥಳೀಯ ಸಂಸ್ಥೆಗಳಿಗೆ ಡಿ.11ರಂದು ಚುನಾವಣೆ ಮತ್ತು ಡಿ.13ರಂದು ಮತ ಎಣಿಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕೇರಳದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಪ್ರದೇಶಗಳಲ್ಲಿ ಮತದಾನ ಮತ್ತು ಮತ ಎಣಿಕೆಯ ದಿನಗಳಂದು 3 ಕಿ.ಮೀ. ವ್ಯಾಪ್ತಿಯ ಗಡಿಭಾಗಗಳಲ್ಲಿ ಶುಷ್ಕದಿನ ಘೋಷಿಸಲಾಗಿದೆ.

ಹಾಗಾಗಿ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕುಗಳು ಮತ್ತು ಕಾಸರಗೋಡು ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿರುವ ಗಡಿಭಾಗದಿಂದ ದ.ಕ. ಜಿಲ್ಲೆಯ 3 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ಬಾರ್ ಗಳನ್ನು ಡಿ.9ರ ಸಂಜೆ 6ರಿಂದ ಡಿ.11ರ ಸಂಜೆ 6ರ ತನಕ ಮತ್ತು ಮತ ಎಣಿಕೆಯ ನಿಮಿತ್ತ ಡಿ.12ರಂದು ಮಧ್ಯರಾತ್ರಿ 12ರಿಂದ ಡಿ.13ರ ಮಧ್ಯರಾತ್ರಿ 12ರವರೆಗೆ ತನಕ ಮುಚ್ಚುವಂತೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News