×
Ad

ಕೊಣಾಜೆ: ಕೆರೆಗೆ ಬಿದ್ದು ಉದ್ಯಮಿ ಮೃತ್ಯು

Update: 2024-10-29 21:15 IST

ಕೊಣಾಜೆ: ಉದ್ಯಮಿ ಸುಧಾಕರ ಆಳ್ವ ಕಂಬಳಕೋಡಿ (45) ಅವರು ಮನೆಯ ಪಕ್ಕದ ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಸುಧಾಕರ ಆಳ್ವ ಅವರು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ನಾಪತ್ತೆಯಾಗಿದ್ದು ಮನೆ ಮಂದಿ ಹಾಗೂ ಸ್ಥಳೀಯರು ಸುತ್ತ ಮುತ್ತ ಹುಡುಕಾಟ ನಡೆಸಿದ್ದು ಮನೆಯ ಪಕ್ಕದ ಕೆರೆಯ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪಂಪ್ ಸ್ವಿಚ್ ಹಾಕಲು ಬಂದಾಗ ಕಾಲು ಜಾರಿ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News