‘ಕಲಾಸಂಪದ’ ಚಿತ್ರಕಲಾ ಮಾರ್ಗದರ್ಶಿ ಪುಸ್ತಕ ಬಿಡುಗಡೆ
ಮಂಗಳೂರು, ಮೇ 16: ಕೆನರಾ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕಿ ರಾಜೇಶ್ವರಿ ಕುಡುಪು ಅವರು ರಚಿಸಿದ ‘ಕಲಾಸಂಪದ’ ಚಿತ್ರಕಲಾ ಮಾರ್ಗದರ್ಶಿ ಪುಸ್ತಕ ಶುಕ್ರವಾರ ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಬಿಡುಗಡೆಗೊಂಡಿತು.
ಪುಸ್ತಕ ಬಿಡುಗಡೆಗೊಳಿಸಿದ ಮಾತನಾಡಿದ ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಕಾರಿ ಜೇಮ್ಸ್ ಕುಟಿನ್ಹಾಘಿ, ಕಲಾಸಂಪದ ಪುಸ್ತಕ ಚಿತ್ರಕಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ಕೈಪಿಡಿಯಾಗಿದೆ. ಕಲಾಶಿಕ್ಷಕಿಯಾಗಿ ರಾಜೇಶ್ವರಿ ಅವರು ಮಕ್ಕಳಿಗಾಗಿ ಈ ಕೈಪಿಡಿ ಹೊರತಂದಿರುವುದು ಶ್ಲಾಘನೀಯ. ಉತ್ತರ ವಲಯದಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಚಿತ್ರಕಲಾ ಗ್ರೇಡಿಂಗ್ ಪರೀಕ್ಷೆಗೆ ಹಾಜರಾಗಲು ವಿಶೇಷ ಕ್ರಮ ವಹಿಸಲಾಗುವುದು ಎಂದರು.
ಲೇಖಕಿ ರಾಜೇಶ್ವರಿ ಕುಡುಪು ಅವರು ಮಾತನಾಡಿ, ರಚನಾ ಕೌಶಲ್ಯ ಕ್ರಿಯಾಶೀಲತೆ ಮತ್ತು ಸೃಜನಶೀಲತೆ ಈ ರೀತಿಯ ಕಲೆಯನ್ನು ಇನ್ನು ಹೆಚ್ಚು ವಿದ್ಯಾರ್ಥಿಗಳನ್ನು ತಲುಪಬೇಕು. ಈ ಉದ್ದೇಶದಿಂದ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ಕಲಾಸಂಪಕ ಎಂಬ ಪುಸ್ತಕ ರಚನೆ ಮಾಡಿ ಎರಡನೇ ಆವತ್ಯಿಯನ್ನು ಕನ್ನಡ ಹಾಗೂ ಆಂಗ್ಲ ಮಾಧ್ಯಮದೊಂದಿಗೆ ಪುಸ್ತಕ ರೂಪದಲ್ಲಿ ಹೊರತರಲಾಗಿದೆ ಎಂದು ಹೇಳಿದರು.
ಈ ಪುಸ್ತಕ ಎಂಟನೇ ತರಗತಿ ಮಕ್ಕಳಿಗೆ ಮಾರ್ಗದರ್ಶನವಾಗಿ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ. ಗ್ರೇಡ್ ಪರೀಕ್ಷೆಗೆ ಹಾಜರಿರುವ ಮಕ್ಕಳಿಗೂ ಇದು ಉಪಯುಕ್ತವಾಗಿದೆ. ಇದನ್ನು ಶಿಕ್ಷಣ ಇಲಾಖೆಯ ಚಿತ್ರಕಲಾ ಶಿಕ್ಷಕರ ಕೈಪಿಡಿ, ಚಿತ್ರಕಲಾ ಸಿಂಚನ ಇವೆಲ್ಲದರ ಮಾರ್ಗದರ್ಶನದಲ್ಲಿ ಹಾಗೂ ಅದೇ ಮಾದರಿಯಲ್ಲಿ ರಚಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆನರಾ ಹೈಸ್ಕೂಲ್ ಸಂಚಾಲಕಿ ಅಶ್ವಿನಿ ಕಾಮತ್, ಡೊಂಗರಕೇರಿ ಕೆನರಾ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಅರುಣಾಕುಮಾರಿ ಸಿ., ಹಿರಿಯ ಕಲಾವಿದರಾದ ಪೆರ್ಮುದೆ ಮೋಹನ್ ಕುಮಾರ್, ವಸಂತ ಕೇದಿಗೆ, ರಾಜೇಂದ್ರ ಕೇದಿಗೆ ಉಪಸ್ಥಿತರಿದ್ದರು.