×
Ad

ಮಹೇಶ್ ಶೆಟ್ಟಿ ತಿಮರೋಡಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ: ಅ.9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

Update: 2025-10-04 20:44 IST

ಮಂಗಳೂರು, ಅ.4: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತನ್ನ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲವು ಶನಿವಾರ ಕೈಗೆತ್ತಿಕೊಂಡಿತು.

ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಪರ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪ್ಪಾಡಿ ಅವರ ವಾದ-ಪ್ರತಿವಾದವನ್ನು ನ್ಯಾಯಾಧೀಶ ಬಸವರಾಜ್ ಆಲಿಸಿದರು.

ಸೆ.30ಕ್ಕೆ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಅ.4ಕ್ಕೆ ವಿಚಾರಣೆಯನ್ನು ಮುಂದೂಡಿದ್ದರು. ಅದರಂತೆ ಶನಿವಾರ ನ್ಯಾಯಾಧೀಶರು ವಿಚಾರಣೆ ಆರಂಭಿಸಿದ್ದರು. ಈ ಸಂದರ್ಭ ಮಹೇಶ್ ಶೆಟ್ಟಿ ತಿಮರೋಡಿ ಪರ ನ್ಯಾಯಾವಾದಿ ದಿನೇಶ್ ಹೆಗ್ಡೆ ಉಳೆಪ್ಪಾಡಿ ಲಿಖಿತ ಹೇಳಿಕೆ ಸಲ್ಲಿಸಿದರು.

ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ನಿರೀಕ್ಷಣಾ ಜಾಮೀನಿನ ಮೇಲಿನ ಅರ್ಜಿಗೆ ಸಂಬಂಧಿಸಿದಂತೆ ಅ.9ರಂದು ಆದೇಶ ನೀಡುವುದಾಗಿ ಪ್ರಕಟಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News