×
Ad

ಮಂಗಳೂರು| ಕಾರು ಢಿಕ್ಕಿ: ಗಾಯಾಳು ಬೈಕ್ ಸವಾರ ಮೃತ್ಯು

Update: 2024-10-18 20:56 IST

ಮಂಗಳೂರು: ನಗರದ ಕೆಪಿಟಿ ಸಮೀಪದ ಎಸ್‌ಕೆಎಸ್ ಅಪಾರ್ಟ್‌ಮೆಂಟ್ ಜಂಕ್ಷನ್ ಬಳಿ ಗುರುವಾರ ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಬಿ. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಗುರುವಾರ ಬೆಳಗ್ಗೆ ಕುಂಟಿಕಾನದಿಂದ ಕೆಪಿಟಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕೆಪಿಟಿ ಕಡೆಯಿಂದ ಎಸ್‌ಕೆಎಸ್ ಅಪಾರ್ಟ್‌ ಮೆಂಟ್ ಕಡೆಗೆ ಹೋಗಲೆಂದು ಕಾರನ್ನು ಚಲಾಯಿಸಿಕೊಂಡ ಡಾ.ಮಹಿಮಾ ಎಂಬವರು ತೆರೆದ ಡಿವೈಡರ್‌ನಲ್ಲಿ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಮುಂದಕ್ಕೆ ಚಲಾಯಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಬೈಕ್‌ಗೆ ಕಾರು ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರ ಗಾಯಗೊಂಡ ಭಾಸ್ಕರ ಅವರನ್ನು ಕಾರು ಚಾಲಕಿ ಸಹಿತ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News