×
Ad

ಮಂಗಳೂರು: ರಸ್ತೆ ಅಪಘಾತ; ಬೈಕ್ ಸವಾರ ಮೃತ್ಯು

Update: 2024-09-27 20:00 IST

ಮಂಗಳೂರು, ಸೆ.27: ನಗರದ ಕುಲಶೇಖರ ಸಮೀಪ ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ. ಕುಲಶೇಖರ ಶಾಲೆಯ ಬಳಿ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಬೈಕ್ ಸವಾರ ಚಂದನ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ ಆತನ ಮೇಲೆ ಸಂಚರಿಸುತ್ತಿದ್ದ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News