×
Ad

ಮಂಗಳೂರು: ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ

Update: 2023-09-20 15:02 IST

ಮಂಗಳೂರು, ಸೆ.20: ಮಂಗಳೂರಿನ ಬದ್ರಿಯಾ ಪದವಿ ಪೂರ್ವ ಕಾಲೇಜು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದಲ್ಲಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟವು ನಗರದ ನೆಹರೂ ಮೈದಾನದಲ್ಲಿ ಸೆ.18ರಂದು ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಆಝಾದ್ ಗ್ರೂಪ್ ನ ಮನ್ಸೂರ್ ಅಹ್ಮದ್, ಮಸ್ಕತ್ ನ ಅಲ್ ಫತ್ಹ್ ಮೆಡಿಕಲ್ ಸೆಂಟರ್ ನಿರ್ದೇಶಕ ಡಾ.ಜಾವೇದ್, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ, ಕೇರಳ ಫುಟ್ಬಾಲ್ ತಂಡದ ವ್ಯವಸ್ಥಾಪಕ ಪಿ.ಸಿ.ಆಸಿಫ್, ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ.ಅಸ್ಲಂ ಭಾಗವಹಿಸಿ ಶುಭ ಹಾರೈಸಿದರು.

ಪಿ.ಸಿ. ಗ್ರೂಪ್ ನಿರ್ದೇಶಕ ಪಿ.ಸಿ.ಆಶೀರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪಂದ್ಯಾಟದಲ್ಲಿ ಒಟ್ಟು 16 ತಂಡಗಳು ಭಾಗವಹಿಸಿದ್ದು, ಅಲೋಶಿಯಸ್ ತಂಡ ಪ್ರಥಮ ಸ್ಥಾನ ಗಳಿಸಿದ್ದು, ಯೆನೆಪೊಯ ತಂಡ ದ್ವಿತೀಯ ಸ್ಥಾನ ಗಳಿಸಿದೆ.

ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಪೊರೇಟರ್ ಅಬ್ದುಲ್ ಲತೀಫ್, ಆದಿಲ್ ಮೊಯ್ದಿನ್, ಕಾಲೇಜಿನ ಪ್ರಾಂಶುಪಾಲೆ ಸೀಮಾ ಮತ್ತು ಕಾರ್ಯಕ್ರಮದ ಸಂಯೋಜಕ ರೋಹಿತ್ ಮತ್ತಿತರರು ಉಪಸ್ಥಿತರಿದ್ದು, ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಿದರು.

ಕಾಲೇಜಿನ ಹಿಂದಿ ಉಪನ್ಯಾಸಕ ಲಿಯಾವುದ್ದೀನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲೆ ಸೀಮಾ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಸಫ್ವಾನ್ ಕೆ. ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News