×
Ad

ಮಂಗಳೂರು | ತಾಂತ್ರಿಕ ಸಮಸ್ಯೆಯಿಂದ ಡಿವೈಡರ್ ಏರಿದ ಬಸ್; ಅಪಾಯದಿಂದ ಪಾರಾದ ಪ್ರಯಾಣಿಕರು

Update: 2025-04-07 14:43 IST

ಮಂಗಳೂರು: ಬ್ರೇಕ್ ಚೇಂಬರ್ ತುಂಡಾದ ಪರಿಣಾಮ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಘಟನೆ ನಗರ ಹೊರ ವಲಯದ ಅರ್ಕುಳ ವಳಚ್ಚಿಲ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬಸ್ ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯೆ ಈ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.

ಬಸ್ಸಿನಲ್ಲಿ ಇಪ್ಪತ್ತರಷ್ಟು ಮಂದಿ ಪ್ರಯಾಣಿಸುತ್ತಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಬಸ್ ನಿರ್ವಾಹಕ ತಿಳಿಸಿದ್ದಾರೆ.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News