×
Ad

ಮಂಗಳೂರು : ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ನಗದು ಪುರಸ್ಕಾರ

Update: 2026-03-10 14:40 IST

ಮಂಗಳೂರು: ಭಾರತೀಯ ರಾಷ್ಟ್ರೀಯ ಮಹಿಳಾ ಕಬಡ್ಡಿ ತಂಡದ ಭರವಸೆಯ ಆಟಗಾರ್ತಿ ಢಾಕಾದಲ್ಲಿ ನಡೆದ ಮಹಿಳಾ ವಿಶ್ವಕಪ್ ಕಬಡ್ಡಿ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ದ.ಕ ಜಿಲ್ಲೆಯ ಹೆಮ್ಮೆಯ ಕ್ರೀಡಾಪಟು ಧನಲಕ್ಷ್ಮಿ ಪೂಜಾರಿ ಅವರಿಗೆ ಮಂಗಳಾದೇವಿ ಕರ ಸೇವಕರು ಬೋಳಾರ ಟ್ರಸ್ಟ್ ನ ಗೌರವಾಧ್ಯಕ್ಷರಾದ ಜೆಪ್ಪು ಚಿದಾನಂದ ನಾಯ್ಕ್ ದೋಹಾ ಕತಾರ್ ಮತ್ತು ಕತಾರ್ ತುಳು ಒಕ್ಕೂಟದ ಸಹಯೋಗದಲ್ಲಿ ಐದು ಲಕ್ಷ ರೂಪಾಯಿ ನಗದು, ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಟ್ರಸ್ಟ್ ವತಿಯಿಂದ ಸಮಾಜದ ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಯಕ್ಷ ಧ್ರುವ ಪಟ್ಲ ಮಂಗಳೂರು ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ, ಚಲನಚಿತ್ರ ನಿರ್ಮಾಪಕ ರವಿ ರೈ ಕಳಸ, ಚಿತ್ರ ನಟ ಶನೀಲ್ ಗೌತಮ್, ಶ್ರೀ ಮಂಗಳಾದೇವಿ ದೇವಸ್ಥಾನದ ಆನುವಂಶಿಕ ಮೊಕ್ತೇಸರರಾದ ಜಿ. ರಘುರಾಮ ಉಪಾಧ್ಯಾಯ, ಎಸ್‌. ಹರೀಶ್ ಐತಾಳ್, ಎಂ. ಅರುಣ್ ಐತಾಳ್, ಬೋಳಾರ ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಅಶೋಕ್ ಕುಮಾರ್. ಬಿ, ಮಾಜಿ ಸದಸ್ಯ ವೇಣುಗೋಪಾಲ ಪುತ್ರನ್, ಮ. ನ. ಪಾ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳಾದೇವಿ ಕರ ಸೇವಕರು ಬೋಳಾರ ಟ್ರಸ್ಟ್ ನ ಅಧ್ಯಕ್ಷ ದಯಾನಂದ ಬೋಳಾರ್ , ಗೌರವಾಧ್ಯಕ್ಷ ಸೀತಾರಾಮ. ಎ , ಸ್ಥಾಪಕಾಧ್ಯಕ್ಷ ಸಂತೋಷ್ ಶೆಟ್ಟಿ ಬೋಳಾರ, ಸದಸ್ಯರಾದ ಲೋಹಿತ್ ಶೆಟ್ಟಿ, ರಿತೇಶ್ ಯೆಯ್ಯಾಡಿ , ವಿಜೇಶ್ ಬೋಳಾರ , ಚಂದ್ರಶೇಖರ ಉಡುಪಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News