×
Ad

ಮಂಗಳೂರು | ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ : ಹರೀಶ್ ಕುಮಾರ್

Update: 2025-11-26 22:00 IST

ಮಂಗಳೂರು, ನ.26: ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ ಭಾರತ ವಿಶ್ವಗುರು ಆಗಲಿದೆ. ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.

ಸಂವಿಧಾನ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಮತ್ತು ಮಾಹಿತಿ ಹಕ್ಕು ಘಟಕದ ವತಿಯಿಂದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಸಂವಿಧಾನ ಪೀಠಿಕೆ ಬೋಧಿಸಿ ಬಳಿಕ ಮಾತನಾಡುತ್ತಿದ್ದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನ ಬಹುತ್ವ ಭಾರತದ ಬುನಾದಿಯಾಗಿದೆ. ಭಾರತೀಯರಿಗೆ ಸಂವಿಧಾನ ಪವಿತ್ರ ಗ್ರಂಥವಾಗಿದ್ದು, ಸಂವಿಧಾನಕ್ಕೆ ಗೌರವ ನೀಡಿ ಸಂವಿಧಾನದ ಬಗ್ಗೆ ತಿಳಿಯುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಸಂವಿಧಾನ ಕಾಪಾಡುವುದು ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಈ ಸಂದರ್ಭ ದ.ಕ.ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಮತ್ತು ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ ಅವರು ಸಂವಿಧಾನದ ಮಹತ್ವದ ಬಗ್ಗೆ ವಿವರಿಸಿದರು.

ಸಂವಿಧಾನ ಪೀಠಿಕೆ, ಅಂಬೇಡ್ಕರ್ ಭಾವಚಿತ್ರ ಅನಾವರಣ :

ಇದಕ್ಕೂ ಮುನ್ನ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾನೂನು ಘಟಕದ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಅಳವಡಿಸಿದ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿದರು.

ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಮುಖಂಡರಾದ ಶಾಹುಲ್ ಹಮೀದ್ ಕೆ.ಕೆ, ಜೋಕಿಂ ಡಿಸೋಜಾ, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ದಿನೇಶ್ ಮುಳೂರು, ಶೈಲಜಾ ಬಂಟ್ವಾಳ, ಪ್ರೇಮ್ ನಾಥ್ ಬಳ್ಳಾಲ್ ಭಾಗ್, ನಿತ್ಯಾನಂದ ಶೆಟ್ಟಿ, ಕಾನೂನು ಘಟಕದ ವಿಧಾನಸಭಾ ಅಧ್ಯಕ್ಷರಾದ ಮೆಲ್ವಿನ್ ಜೋನ್ಸನ್ ಲೋಬೊ, ನವೀನ್ ಪೈಸ್, ಕ್ಸೆವಿಯರ್ ಪಾಲೇಲಿ ಮತ್ತಿತರರು ಉಪಸ್ಥಿತರಿದ್ದರು.

ಡಿಸಿಸಿ ಉಪಾಧ್ಯಕ್ಷ ಶುಭೋದಯ ಆಳ್ವ ಸ್ವಾಗತಿಸಿದರು. ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ವಂದಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News