×
Ad

ಮಂಗಳೂರು: ಸಂಚಾರ ಠಾಣೆಯ ಪೊಲೀಸ್ ಆತ್ಮಹತ್ಯೆ

Update: 2023-09-14 21:23 IST

ಮಂಗಳೂರು, ಸೆ.14: ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿದ್ದ ಮಹೇಶ್(31) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೂಲತಃ ಗದಗ ಜಿಲ್ಲೆಯ ಮಹೇಶ್ ಆತ್ಮಹತ್ಯೆ ಮಾಡಿಕೊಂಡವರು. ಇವರು ನಗರದ ಕಪಿತಾನಿಯೋದಲ್ಲಿ ಬಾಡಿಗೆ ಮನೆಯಲ್ಲಿ ಇನ್ನೋರ್ವ ಪೊಲೀಸ್ ಸಿಬ್ಬಂದಿಯೊಂದಿಗೆ ವಾಸವಾಗಿದ್ದರು ಎನ್ನಲಾಗಿದೆ. ಗುರುವಾರ ಮಧ್ಯಾಹ್ನ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.

ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಕುಟುಂಬ ಸದಸ್ಯರು ಆಗಮಿಸಿದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News