×
Ad

ಮಂಗಳೂರು | ರಿಕ್ಷಾದಲ್ಲಿ ಗಾಂಜಾ ಮಾರಾಟ : ಆರೋಪಿ ಸೆರೆ

Update: 2025-08-08 19:17 IST

ಮಂಗಳೂರು,ಆ.8 : ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಜ್ಯೋತಿ ಜಂಕ್ಷನ್ ಬಳಿ ಆಟೋ ರಿಕ್ಷಾದಲ್ಲಿ ಗುರುವಾರ ಗಾಂಜಾ ಮಾರಾಟ ಮಾಡುತ್ತಿದ್ದ ವಾಮಂಜೂರು ನಿವಾಸಿ ಬದ್ರುದ್ದೀನ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 2 ಕೆಜಿ ತೂಕದ ಗಾಂಜಾ ಮತ್ತು 20 ಸಾವಿರ ರೂ. ನಗದು, 1 ಮೊಬೈಲ್ ಫೋನ್, 1 ಆಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕರಾದ ಗವಿರಾಜು. ಆರ್.ಪಿ., ಎಸ್ಸೈ ಅರುಣ್ ಕುಮಾರ್ ಡಿ, ಎಚ್.ಸಿ. ಗಳಾದ ಕಮಲಾಕ್ಷ, ಶಶಿಧರ್, ಶಂಕ್ರಪ್ಪ ಮತ್ತು ಪಿಸಿಗಳಾದ ಸಿಕಂದರ್, ಬೀರೇಂದ್ರ, ಪ್ರದೀಪ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News